ಜಮೀನು ವ್ಯಾಜ್ಯ: ಮನೆಗೆ ನುಗ್ಗಿ ವೃದ್ಧನ ಕೊಲೆ: ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ

ಜಮೀನು ವ್ಯಾಜ್ಯಕ್ಕೆ ವ್ಯಕ್ತಿಯೋರ್ವ ಮನೆಗೆ ನುಗ್ಗಿ ಸಂಬಂಧಿಕನನ್ನೇ ಹತ್ಯೆ ಮಾಡಿ, ಬಳಿಕ ಘಟನಾ ಸ್ಥಳದಲ್ಲೇ ಇದ್ದು ಪೊಲೀಸರಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ 11 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಪೋಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮೀನರಸಪ್ಪ (60) ಹತ್ಯೆಗೀಡಾದವರು. ನಂದೀಶ್ ಕೊಲೆಗೈದ ಆರೋಪಿ.

ಕೊಲೆಯಾದ ಲಕ್ಷ್ಮೀನರಸಪ್ಪ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಗುತ್ತಿಗೆದಾರರಾಗಿದ್ದರು. ಲಕ್ಷ್ಮೀನರಸಪ್ಪ ಮತ್ತು ಆರೋಪಿ ನಂದೀಶ್ ಕುಟುಂಬದ ನಡುವೆ ಹಲವು ವರ್ಷಗಳಿಂದ ಜಮೀನು ಕಲಹ ಇದ್ದು, ಕೋರ್ಟ್​ನಲ್ಲಿ ಕೇಸ್ ನಡೆಯುತ್ತಿತ್ತು.

ಭಾನುವಾರ ಬೆಳಗ್ಗೆ ಏಕಾಏಕಿ ಮನೆಗೆ ನುಗ್ಗಿದ ಆರೋಪಿ ನಂದೀಶ್, ಲಕ್ಷ್ಮೀನರಸಪ್ಪ ಅವರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಇದರಿಂದಾಗಿ ಲಕ್ಷ್ಮೀನರಸಪ್ಪ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಲ್ಲೆ ನಡೆಯುತ್ತಿದ್ದ ವೇಳೆ ಲಕ್ಷ್ಮೀನರಸಪ್ಪ ಅವರನ್ನು ಪಾರು ಮಾಡಲು ಆತನ ಕುಟುಂಬಸ್ಥರು ಬಂದಿದ್ದಾರೆ. ಈ ವೇಳೆ ಅವರ ಮೇಲೂ ದಾಳಿ ಮಾಡಿದ್ದರಿಂದ ಅವರು ಕೂಡ ಗಾಯಗೊಂಡಿದ್ದಾರೆ ಎಂದು ಮೃತನ ಕುಟುಂಬಸ್ಥರು ತಿಳಿಸಿದ್ದಾರೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಬಳಿಕ ಪರಾರಿಯಾಗದ ಆರೋಪಿ, ಘಟನಾ ಸ್ಥಳದಲ್ಲೇ ಇದ್ದು ಪೊಲೀಸರಿಗೆ ಶರಣಾಗಿದ್ದಾನೆ.

ಆರೋಪಿಯನ್ನು ವಿಚಾರಣೆ ನಡೆಸಿರುವ ಪೊಲೀಸರು, ಕೊಲೆಗೆ ಜಮೀನು ವ್ಯಾಜ್ಯ ಕಾರಣವೆಂದು ತಿಳಿಸಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

8 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

9 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

14 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

15 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

20 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

20 hours ago