ಜಮೀನು ವ್ಯಾಜ್ಯ: ಮನೆಗೆ ನುಗ್ಗಿ ವೃದ್ಧನ ಕೊಲೆ: ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ

ಜಮೀನು ವ್ಯಾಜ್ಯಕ್ಕೆ ವ್ಯಕ್ತಿಯೋರ್ವ ಮನೆಗೆ ನುಗ್ಗಿ ಸಂಬಂಧಿಕನನ್ನೇ ಹತ್ಯೆ ಮಾಡಿ, ಬಳಿಕ ಘಟನಾ ಸ್ಥಳದಲ್ಲೇ ಇದ್ದು ಪೊಲೀಸರಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ 11 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಪೋಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮೀನರಸಪ್ಪ (60) ಹತ್ಯೆಗೀಡಾದವರು. ನಂದೀಶ್ ಕೊಲೆಗೈದ ಆರೋಪಿ.

ಕೊಲೆಯಾದ ಲಕ್ಷ್ಮೀನರಸಪ್ಪ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಗುತ್ತಿಗೆದಾರರಾಗಿದ್ದರು. ಲಕ್ಷ್ಮೀನರಸಪ್ಪ ಮತ್ತು ಆರೋಪಿ ನಂದೀಶ್ ಕುಟುಂಬದ ನಡುವೆ ಹಲವು ವರ್ಷಗಳಿಂದ ಜಮೀನು ಕಲಹ ಇದ್ದು, ಕೋರ್ಟ್​ನಲ್ಲಿ ಕೇಸ್ ನಡೆಯುತ್ತಿತ್ತು.

ಭಾನುವಾರ ಬೆಳಗ್ಗೆ ಏಕಾಏಕಿ ಮನೆಗೆ ನುಗ್ಗಿದ ಆರೋಪಿ ನಂದೀಶ್, ಲಕ್ಷ್ಮೀನರಸಪ್ಪ ಅವರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಇದರಿಂದಾಗಿ ಲಕ್ಷ್ಮೀನರಸಪ್ಪ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಲ್ಲೆ ನಡೆಯುತ್ತಿದ್ದ ವೇಳೆ ಲಕ್ಷ್ಮೀನರಸಪ್ಪ ಅವರನ್ನು ಪಾರು ಮಾಡಲು ಆತನ ಕುಟುಂಬಸ್ಥರು ಬಂದಿದ್ದಾರೆ. ಈ ವೇಳೆ ಅವರ ಮೇಲೂ ದಾಳಿ ಮಾಡಿದ್ದರಿಂದ ಅವರು ಕೂಡ ಗಾಯಗೊಂಡಿದ್ದಾರೆ ಎಂದು ಮೃತನ ಕುಟುಂಬಸ್ಥರು ತಿಳಿಸಿದ್ದಾರೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಬಳಿಕ ಪರಾರಿಯಾಗದ ಆರೋಪಿ, ಘಟನಾ ಸ್ಥಳದಲ್ಲೇ ಇದ್ದು ಪೊಲೀಸರಿಗೆ ಶರಣಾಗಿದ್ದಾನೆ.

ಆರೋಪಿಯನ್ನು ವಿಚಾರಣೆ ನಡೆಸಿರುವ ಪೊಲೀಸರು, ಕೊಲೆಗೆ ಜಮೀನು ವ್ಯಾಜ್ಯ ಕಾರಣವೆಂದು ತಿಳಿಸಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Share
Published by
Ramesh Babu

Recent Posts

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರ ಕೋರ್ಟ್ ಗೆ ಶರಣು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…

3 hours ago

ನಮ್ಮ ನಿಷ್ಠೆ ಪ್ರಕೃತಿಯೆಡೆಗೆ ಇರಲಿ……..

ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…

7 hours ago

ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ಸಿಎಂ ಸಭೆ: ಸಭೆಯ ಪ್ರಮುಖಾಂಶಗಳು ಇಲ್ಲಿವೆ ಓದಿ…

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…

18 hours ago

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

1 day ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

1 day ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago