ಜಮೀನು ವ್ಯಾಜ್ಯಕ್ಕೆ ವ್ಯಕ್ತಿಯೋರ್ವ ಮನೆಗೆ ನುಗ್ಗಿ ಸಂಬಂಧಿಕನನ್ನೇ ಹತ್ಯೆ ಮಾಡಿ, ಬಳಿಕ ಘಟನಾ ಸ್ಥಳದಲ್ಲೇ ಇದ್ದು ಪೊಲೀಸರಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ 11 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಪೋಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮೀನರಸಪ್ಪ (60) ಹತ್ಯೆಗೀಡಾದವರು. ನಂದೀಶ್ ಕೊಲೆಗೈದ ಆರೋಪಿ.
ಕೊಲೆಯಾದ ಲಕ್ಷ್ಮೀನರಸಪ್ಪ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಗುತ್ತಿಗೆದಾರರಾಗಿದ್ದರು. ಲಕ್ಷ್ಮೀನರಸಪ್ಪ ಮತ್ತು ಆರೋಪಿ ನಂದೀಶ್ ಕುಟುಂಬದ ನಡುವೆ ಹಲವು ವರ್ಷಗಳಿಂದ ಜಮೀನು ಕಲಹ ಇದ್ದು, ಕೋರ್ಟ್ನಲ್ಲಿ ಕೇಸ್ ನಡೆಯುತ್ತಿತ್ತು.
ಭಾನುವಾರ ಬೆಳಗ್ಗೆ ಏಕಾಏಕಿ ಮನೆಗೆ ನುಗ್ಗಿದ ಆರೋಪಿ ನಂದೀಶ್, ಲಕ್ಷ್ಮೀನರಸಪ್ಪ ಅವರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಇದರಿಂದಾಗಿ ಲಕ್ಷ್ಮೀನರಸಪ್ಪ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಲ್ಲೆ ನಡೆಯುತ್ತಿದ್ದ ವೇಳೆ ಲಕ್ಷ್ಮೀನರಸಪ್ಪ ಅವರನ್ನು ಪಾರು ಮಾಡಲು ಆತನ ಕುಟುಂಬಸ್ಥರು ಬಂದಿದ್ದಾರೆ. ಈ ವೇಳೆ ಅವರ ಮೇಲೂ ದಾಳಿ ಮಾಡಿದ್ದರಿಂದ ಅವರು ಕೂಡ ಗಾಯಗೊಂಡಿದ್ದಾರೆ ಎಂದು ಮೃತನ ಕುಟುಂಬಸ್ಥರು ತಿಳಿಸಿದ್ದಾರೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಬಳಿಕ ಪರಾರಿಯಾಗದ ಆರೋಪಿ, ಘಟನಾ ಸ್ಥಳದಲ್ಲೇ ಇದ್ದು ಪೊಲೀಸರಿಗೆ ಶರಣಾಗಿದ್ದಾನೆ.
ಆರೋಪಿಯನ್ನು ವಿಚಾರಣೆ ನಡೆಸಿರುವ ಪೊಲೀಸರು, ಕೊಲೆಗೆ ಜಮೀನು ವ್ಯಾಜ್ಯ ಕಾರಣವೆಂದು ತಿಳಿಸಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…