ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ.
ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ ಎಂದರು.
ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ನಿನ್ನೆ ಸಂಜೆಯೇ ರವಾನಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದರು.
ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಹೇಳಿದರು.
ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಂತ್ರಸ್ತರಾಗಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಈ ಕೂಡಲೇ ಕಾಶ್ಮೀರಕ್ಕೆ ತೆರಳುತ್ತಿದ್ದೇನೆ. ನಾನು ಮತ್ತು ನಮ್ಮ ವಿಶೇಷ ಅಧಿಕಾರಿಗಳ ತಂಡ ಸಂತ್ರಸ್ತರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲಿದ್ದೇವೆ ಎಂದು ಹೇಳಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…