ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರ ಗುಂಡಿನ ದಾಳಿಗೆ ಕರ್ನಾಟಕದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಸೇರಿದಂತೆ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ.
ಬೆಳಗ್ಗೆಯಿಂದ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ಕೌಂಟರ್ನಲ್ಲಿ ಮೃತಪಟ್ಟ ನಾಲ್ವರು ಸೈನಿಕರಲ್ಲಿ ಇಬ್ಬರು ಸೇನಾ ಕ್ಯಾಪ್ಟನ್ಗಳಾಗಿದ್ದಾರೆ. 63 ರಾಷ್ಟ್ರೀಯ ರೈಫಲ್ಸ್ನ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್(28), ಮತ್ತು 9 ಪಿಎಆರ್ಎ ಕ್ಯಾಪ್ಟನ್ ಶುಭಂ ಮತ್ತು ಹವಾಲ್ದಾರ್ ಮಜೀದ್ ಮೃತಪಟ್ಟವರು.
ಸಿಎಂ ಸಿದ್ದರಾಮಯ್ಯನವರಿಂದ ಸಂತಾಪ
ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರ ಗುಂಡಿನ ದಾಳಿಗೆ ಕರ್ನಾಟಕದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಸೇರಿದಂತೆ ನಾಲ್ವರು ಸೈನಿಕರು ಹುತಾತ್ಮರಾಗಿರುವ ಸುದ್ದಿ ಅತ್ಯಂತ ದುಃಖಕರ. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ಹುತಾತ್ಮ ಸೈನಿಕರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬವರ್ಗಕ್ಕೆ ದೇವರು ಕರುಣಿಸಲಿ. ಮೃತ ಯೋಧರ ಅನನ್ಯ ದೇಶಭಕ್ತಿ, ತ್ಯಾಗ, ಬಲಿದಾನವನ್ನು ನಾಡು ಚಿರಕಾಲ ಸ್ಮರಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಂದ ಸಂತಾಪ
ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಸೇನಾ ಕಾರ್ಯಾಚರಣೆಯ ವೇಳೆ ಹುತಾತ್ಮರಾದ ಹೆಮ್ಮೆಯ ಕನ್ನಡಿಗ, ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
ಪ್ರಾಂಜಲ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…