Categories: ಲೇಖನ

ಜಯಂತಿಗಳ ಆಚರಣೆ ಹಾಸ್ಯಾಸ್ಪದವಾಗುವ ಮುನ್ನ…..

 

 

ಇತ್ತೀಚಿನ ಕೆಲವು ವರ್ಷಗಳಲ್ಲಿ ಮಹಾನ್ ವ್ಯಕ್ತಿಗಳ ಜಯಂತಿ ಯಾಕೋ ಅತಿರೇಕಕ್ಕೆ ತಲುಪಿ ಹಾಸ್ಯಸ್ಪದವಾಗುತ್ತಿರುವಂತೆ ಭಾಸವಾಗುತ್ತಿದೆ. ಅದೇ ಹಾಡು, ಅದೇ ಕುಣಿತ, ಅದೇ ಭಾಷಣ, ಅದೇ ಜನರು, ಅದೇ ಉನ್ಮಾದ, ಅದೇ ಭಕ್ತಿಯ ಪರಾಕಾಷ್ಠೆ, ಅದೇ ವ್ಯಕ್ತಿಯ ವಿಜೃಂಭಣೆ ಕೆಲವೊಮ್ಮೆ ತುಂಬಾ ವಿಚಿತ್ರವೆನಿಸುತ್ತಿದೆ.

ಗಾಂಧಿ ಜಯಂತಿಗೂ, ಹನುಮ ಜಯಂತಿಗೂ, ಅಂಬೇಡ್ಕರ್ ಜಯಂತಿಗೂ, ರಾಮ ಜಯಂತಿಗೂ, ಬಸವ ಜಯಂತಿಗೂ, ಮಹಾವೀರ ಜಯಂತಿಗೂ, ವಾಲ್ಮೀಕಿ ಜಯಂತಿಗೂ, ಕೆಂಪೇಗೌಡ ಜಯಂತಿಗೂ, ಬುದ್ದ ಜಯಂತಿಗೂ, ಕಬ್ಬಾಳಮ್ಮ ಜಯಂತಿಗೂ, ರಾಘವೇಂದ್ರ ಸ್ವಾಮಿ ಜಯಂತಿಗೂ, ಶಿರಡಿ ಸಾಯಿಬಾಬಾ ಜಯಂತಿಗೂ, ಮಂಜುನಾಥನ ರಥೋತ್ಸವಕ್ಕೂ, ವೆಂಕಟೇಶ್ವರನ ಮಹೋತ್ಸವಕ್ಕೂ ವ್ಯತ್ಯಾಸವೇ ಗೊತ್ತಾಗುತ್ತಿಲ್ಲ.

ಅವರವರಿಗೆ ಇಷ್ಟ ಬಂದಂತೆ ಅವರವರನ್ನು ವಿಜೃಂಭಿಸುತ್ತಾ ಹಾಸ್ಯಾಸ್ಪದವಾಗಿರುವುದು ಅಷ್ಟು ಒಳ್ಳೆಯ ಬೆಳವಣಿಗೆಯಲ್ಲ.

ಮೊದಲನೆಯದಾಗಿ ಪೌರಾಣಿಕ ಪಾತ್ರಗಳ ಜಯಂತಿಯೇ ಬೇರೆ, ಐತಿಹಾಸಿಕ ವ್ಯಕ್ತಿಗಳ ಜಯಂತಿಯೇ ಬೇರೆ, ಹೋರಾಟಗಾರರ ಜಯಂತಿಯೆ ಬೇರೆ, ಚಿಂತಕರು ದಾರ್ಶನಿಕರ ಜಯಂತಿಯೇ ಬೇರೆ. ಈ ಎಲ್ಲವೂ ಒಟ್ಟಾರೆ ವಿಭಿನ್ನವಾದದ್ದು, ಜೊತೆಗೆ ಜಯಂತಿ ಎಂದರೆ ಹಾಡು, ಕುಣಿತ, ಮೆರವಣಿಗೆ, ಉತ್ಸವಗಳು ಮಾತ್ರವಲ್ಲ ಅದನ್ನು ಮೀರಿದ ತುಂಬಾ ಕ್ರಿಯಾಶೀಲ ಚಟುವಟಿಕೆಗಳು ಆ ಜನುಮದಿನದ ಸಂದರ್ಭದಲ್ಲಿ ಹಮ್ಮಿಕೊಳ್ಳಬೇಕಾಗಿದೆ‌.
ಆ ವಿಚಾರ ಚಿಂತನೆಗಳನ್ನು ಎಲ್ಲಾ ಜನಮನದಲ್ಲಿ ಮೂಡಿಸಬೇಕಾಗಿದೆ.
ಅದಕ್ಕಾಗಿ ಜಯಂತಿಗಳ ಆಚರಣೆಯೇ ಹೊರತು ಸುಮ್ಮನೆ ಸಂಘಟನೆಗಾಗಿ, ರಾಜಕೀಯಕ್ಕಾಗಿ, ಮನರಂಜನೆಗಾಗಿ ಜಯಂತಿಗಳನ್ನು ಆಚರಿಸುವುದರಲ್ಲಿ ಯಾವುದೇ ಅರ್ಥವೂ ಇಲ್ಲ.

ಅದರಲ್ಲೂ ಗಾಂಧಿ, ಅಂಬೇಡ್ಕರ್, ಬಸವ ಜಯಂತಿಗಳಲ್ಲಿ ಅವರ ಅನುಯಾಯಿಗಳ, ಬೆಂಬಲಿಗರ, ಅಭಿಮಾನಿಗಳ ಜವಾಬ್ದಾರಿ ತುಂಬಾ ಹೆಚ್ಚಾಗಿರುತ್ತದೆ. ಇವರು ಮನರಂಜನೆಯ ಸರಕುಗಳಲ್ಲ. ಈ ಸಮಾಜದ ಎಲ್ಲಾ ನಾಗರಿಕ ಧರ್ಮದ, ಭಾರತದ ಸಾಂಸ್ಕೃತಿಕ ಪರಂಪರೆಯ ಪ್ರತಿನಿಧಿಗಳು. ಅವರನ್ನು ಅವರ ಜನುಮದಿನದ ಸಂದರ್ಭದಲ್ಲಿ ನೆನಪಿಸಿಕೊಳ್ಳುವ ಕ್ರಿಯೆ ಅತ್ಯಂತ ಪ್ರಬುದ್ಧವಾಗಿರಬೇಕು, ಕ್ರಿಯಾತ್ಮಕವಾಗಿರಬೇಕು, ಅದೆಲ್ಲವನ್ನು ಮೀರಿ ನಮ್ಮ ಮನಸ್ಸಿನ ಪರಿವರ್ತನೆಯ, ಸಮಾಜದ ಮನಸ್ಥಿತಿಯ ಪರಿವರ್ತನೆಯ ಹಾದಿಯ ದ್ವಾರಗಳು ಮುಕ್ತವಾಗುವಂತಿರಬೇಕು.

ಆಗ ಮಾತ್ರ ಜಯಂತಿಗಳಿಗೆ ಅರ್ಥವಿರುತ್ತದೆ. ಹೆಸರುಬೇಳೆ ಪಾನಕ, ಕೋಸಂಬರಿ, ಚಿತ್ರಾನ್ನ, ಮೊಸರನ್ನ, ಬಿರ್ಯಾನಿ ಹಂಚುವಿಕೆಯಾಗಲಿ ಅಥವಾ ಬಣ್ಣ ಬಣ್ಣದ ಬಾವುಟಗಳ ಮೆರವಣಿಗೆಯಾಗಲಿ, ಘೋಷಣೆಗಳಾಗಲಿ ಸಾಂಕೇತಿಕ ಮಾತ್ರ.

ಜಯಂತಿಗಳ ಆಚರಣೆ ತಪ್ಪಲ್ಲ. ಅದು ಇಂದಿನ ಕಾಲಕ್ಕೆ ಅತ್ಯಂತ ಅನಿವಾರ್ಯವೂ, ಮಹತ್ವವು ಹೌದು. ಆದರೆ ಆಚರಣೆಯ ರೀತಿಯ ಬಗ್ಗೆ ಪುನರ್ ವಿಮರ್ಶೆ ಮಾಡಿಕೊಳ್ಳಬೇಕಾದ ಸಂದರ್ಭ ಬಂದಿದೆ. ಅವರ ವಿಚಾರಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ತಿಳಿಸುವ, ಮನವರಿಕೆ ಮಾಡಿಕೊಳ್ಳುವ, ನಡವಳಿಕೆಯಾಗಿ ರೂಪಿಸುವ ಕೆಲಸವಾಗಬೇಕಾಗಿದೆ.

ದಿನನಿತ್ಯದ ಚಟುವಟಿಕೆಗಳಲ್ಲಿ, ನಮ್ಮ ನಡವಳಿಕೆಗಳಲ್ಲಿ, ಸಮಾಜದ ಭಾಗವಹಿಸುವಿಕೆಯ ನಮ್ಮ ಪಾತ್ರಗಳಲ್ಲಿ ಅತ್ಯಂತ ಪ್ರಗತಿಪರ ಮನೋಭಾವವನ್ನು ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಈ ಜಯಂತಿಗಳು ಪೂರಕವಾಗಿ ಕೆಲಸ ಮಾಡುವಂತೆ ಮಾಡಬೇಕಾಗಿದೆ.

ಇಲ್ಲದಿದ್ದರೆ ಇದು ಯಾವುದೋ ಉತ್ಸವದಂತೆ ಕಾಟಾಚಾರದ ಕಾರ್ಯಕ್ರಮವಾಗಬಹುದು ಯೋಚಿಸಿ ನೋಡಿ. ಅಯ್ಯಪ್ಪ ಸ್ವಾಮಿಯನ್ನು ವಿವಿಧ ಆಧುನಿಕ ಹಾಡುಗಳಲ್ಲಿ, ರ್ಯಾಪ್ ಸಂಗೀತದಲ್ಲಿ ವರ್ಣಿಸುವಂತೆ, ಆಂಜನೇಯ ಸ್ವಾಮಿಯನ್ನು ಚಲನಚಿತ್ರ ಗೀತೆಯಲ್ಲಿ ವರ್ಣಿಸುವಂತೆ, ಅಂಬೇಡ್ಕರ್ ರವರನ್ನು, ಗಾಂಧಿಯವರನ್ನು, ಬಸವಣ್ಣನವರನ್ನು ವರ್ಣಿಸುತ್ತಾ, ನೃತ್ಯ ಮಾಡುತ್ತಾ ಸಾಗಿದರೆ, ಅವರುಗಳಿಗೆ ದೀರ್ಘದಂಡ ನಮಸ್ಕಾರ ಹಾಕಿ, ಹಣ್ಣು, ಕಾಯಿ ಅರ್ಪಿಸಿ, ನೈವೇದ್ಯ ಮಾಡಿದರೆ ವಿಚಾರಗಳು ಮೌಢ್ಯವಾಗಿ, ನಿಧಾನವಾಗಿ ಸಾಯುವ ಸಾಧ್ಯತೆಯೂ ಇದೆ, ಎಚ್ಚರ……..

ಜಯಂತಿಗಳು ಎಲ್ಲಾ ವರ್ಗದ ಜನರನ್ನು ಒಳಗೊಳ್ಳುವ, ಅಭಿವೃದ್ಧಿ ಹೊಂದಿದ ನಾಗರಿಕ ಸಮಾಜ ನಿರ್ಮಾಣವಾಗುವ ಆಶಯದ ರೀತಿಯಲ್ಲಿದ್ದರೆ ಉತ್ತಮವಲ್ಲವೇ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago