ಜಲ ಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಬಿ.ಎನ್.ಬಚ್ಚೇಗೌಡ

ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿದೆ. ಜಿಲ್ಲೆಯಲ್ಲಿ ಬರಗಾಲ ಉಂಟಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಂಡು ಜಲ ಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳಿಸಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್.ಬಚ್ಚೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ಜಲ ಜೀವನ್ ಮಿಷನ್ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಅವರು. ಜಲ ಜೀವನ್ ಮಿಷನ್ ಕಾಮಗಾರಿ ಶೀಘ್ರ ಮುಕ್ತಾಯಗೊಂಡರೆ ಕುಡಿಯುವ ನೀರಿಗೆ ತೊಂದರೆ ಆಗುವುದಿಲ್ಲ. ಜಿಲ್ಲೆಯಲ್ಲಿ ಈಗಾಗಲೇ 714 ಕೊಳವೆಬಾವಿ ಕೊರೆದಿದ್ದು ಅದರಲ್ಲಿ 626 ಕೊಳವೆಬಾವಿಗಳು ಯಶಸ್ವಿಯಾಗಿದೆ. ಒವರ್ ಹೆಡ್ ಟ್ಯಾಂಕ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ಹಾಗಾಗಿ ಶೀಘ್ರ ಜಲ ಜೀವನ್ ಮಿಷನ್ ಕಾಮಗಾರಿ ಪೂರ್ಣ ಗೊಳಿಸಿ ಎಂದು ಹೇಳಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿ ನಿರ್ಮಾಣವಾಗಬೇಕಿರುವ ಮನೆಗಳು, ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಶೀಘ್ರವೇ ಪೂರ್ಣಗೊಳಿಸಲು ಫಲಾನುಭವಿಗಳಿಗೆ ಸೂಚನೆ ನೀಡಿ, ನಿವೇಶನ ಇರುವಂತಹ ಫಲಾನುಭವಿಗಳನ್ನು ಗುರ್ತಿಸಿ ಮನೆ ಮಂಜೂರು ಮಾಡಿ ಎಂದು ಹೇಳಿದರು.

ಮಾರ್ಚ್ 3 ರಿಂದ ಪಲ್ಸ್ ಪೋಲಿಯೊ ಕಾರ್ಯಕ್ರಮವಿದ್ದು ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಿ 0-5 ವರ್ಷದೊಳಗಿನ ಪ್ರತಿ ಮಗುವಿಗೆ ತಪ್ಪದೇ ಲಸಿಕೆ ಹಾಕಿಸಬೇಕು. ಜನನಿ ಸುರಕ್ಷಾ ಯೋಜನೆಯ ಸೌಲಭ್ಯ ಪ್ರತಿ ಅರ್ಹ ಫಲಾನುಭವಿಗಳಿಗೆ ಸಿಗಬೇಕು ಎಂದರು.
ಕಳೆದ ವರ್ಷಕ್ಕಿಂತ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆ ಯಲ್ಲಿ ಜಿಲ್ಲೆ ಉತ್ತಮ ಫಲಿತಾಂಶ ಪಡೆಯಬೇಕು. ಹೀಗಾಗಿ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ಪೋಷಕರಿಗೆ ವಿಶೇಷ ತರಬೇತಿ ನೀಡಿ, ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಶಾಲಾ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಕೆಲವು ಭಾಗಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಯು ವಿಳಂಬವಾಗುತ್ತಿದ್ದು, ಇದರಿಂದಾಗಿ ಕಾಮಗಾರಿ ವೆಚ್ಚವು ಹೆಚ್ಚಾಗಲಿದೆ. ಸಂಬಂಧಿಸಿದ ಅಧಿಕಾರಿಗಳು ಶೀಘ್ರವೇ ಕಾಮಗಾರಿ ಮುಗಿಸುವಂತೆ ಸೂಚಿಸಿದರು.

ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳಲ್ಲಿ ಬರುವಂತಹ ಗಂಗಾ ಕಲ್ಯಾಣ ಯೋಜನೆಯನ್ನು ಶೀಘ್ರವೇ ಅನುಷ್ಠಾನಕ್ಕೆ ತಂದು ಫಲಾನುಭವಿಗಳಿಗೆ ತಲುಪಿಸಿ ಎಂದರು.

ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ ಆಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ. ವರದಿಗಳ ಪ್ರಕಾರ ಬರಗಾಲದಿಂದ ಜಿಲ್ಲೆಯಲ್ಲಿ 25 ಅಡಿ ಅಂತರ್ಜಲ ಕುಸಿದಿದೆ. ಜನ ಜಾನುವಾರುಗಳಿಗೆ ನೀರು, ಮೇವು ಅಭಾವ ಆಗದಂತೆ ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಯೋಜನೆಗಳನ್ನು ವಿಳಂಬ ಮಾಡದೆ ಶೀಘ್ರವೇ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ, ಅಧಿಕಾರಿಗಳು ಸಮಯಪ್ರಜ್ಞೆ ಪಾಲಿಸಿ ಕರ್ತವ್ಯವನ್ನು ಜವಾಬ್ದಾರಿಯಾಗಿ ನಿರ್ವಹಿಸಬೇಕು. ಜಿಲ್ಲೆಯನ್ನು ಎಲ್ಲಾ ವಿಧದಲ್ಲೂ ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪ ಕಾರ್ಯದರ್ಶಿ ರಮೇಶ್, ಯೋಜನಾಧಿಕಾರಿ ವಿಠ್ಠಲ ಕಾವ್ಳೆ ಸೇರಿದಂತೆ ದಿಶಾ ಸಮಿತಿಯ ನಾಮನಿರ್ದೇಶಿತ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

7 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

12 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

21 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago