ಜಲ ಜೀವನ್ ಮಿಷನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ

ಮನೆ ಮನೆಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತರಲಾಗಿದ್ದು, ವಿಳಂಬ ಮಾಡದೇ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮವಹಿಸಿ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಅವರು 1192 ಪ್ರದೇಶಗಳಲ್ಲಿ ಕಾಮಗಾರಿ ಕೈಗೊಂಡಿದ್ದು, ಕೆಲವು ಪ್ರದೇಶಗಳಲ್ಲಿ ಒವರ್ ಹೆಡ್ ಟ್ಯಾಂಕ್ ನಿರ್ಮಿಸಲು, ಕೊಳವೆ ಬಾವಿ ಕೊರೆಸಲು ವಿಳಂಬವಾಗಿದೆ. ಹೀಗಾಗಿ ಕಾಮಗಾರಿ ಪ್ರಗತಿ ವಿಳಂಬವಾಗುತ್ತಿದ್ದು, ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿ ಕುರಿತಂತೆ ಮಾಹಿತಿ ಪಡೆದ ಅವರು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಗುರುತಿಸಿರುವ ಜಾಗಗಳಲ್ಲಿ ಕೆಲವು ಕಡೆ ಕಾಮಗಾರಿ ಪ್ರಗತಿಯಲ್ಲಿದ್ದು, ದೇವನಹಳ್ಳಿ ಹಾಗೂ ವಿಜಯಪುರ ಟೌನ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಜಾಗ ಗುರ್ತಿಸಲ್ಪಟ್ಟಿದೆ. ಶೀಘ್ರವೇ ಕಾಮಗಾರಿ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದರು.

ಅನ್ನ ಭಾಗ್ಯ ಯೋಜನೆ ಅಡಿ 231009 ಫಲಾನುಭವಿಗಳಿದ್ದು ಅದರಲ್ಲಿ 170329 ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ನೇರವಾಗಿ 9,84,50,910/- ಕೋಟಿ ರೂಗಳು ಜುಲೈ ಮಾಹೆಯಲ್ಲಿ ಜಮೆಯಾಗಿದೆ. ಆಗಸ್ಟ್ ತಿಂಗಳ ಹಣ ಸಂದಾಯ ಪ್ರಗತಿಯಲ್ಲಿದೆ. ಉಳಿದಂತೆ ವಿವಿಧ ಕಾರಣಗಳಿಂದ ಹಣ ಜಮೆ ಆಗಿರದ ಫಲಾನುಭವಿಗಳಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ತಿಳಿಸಿ. ಸಮಸ್ಯೆ ಬಗೆಹರಿಸಿಕೊಂಡು ಮುಂದಿನ ಮಾಹೆಯೊಳಗೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿ. ಬಿ. ಟಿ ಮೂಲಕ ಜಮೆ ಮಾಡಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ನಮ್ಮ ಕ್ಲಿನಿಕ್ ಕಟ್ಟಡ ನಿರ್ಮಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಆಯುಷ್ಮಾನ್ ಕಾರ್ಡ್ ಗಳನ್ನು ಕುಟುಂಬದ ಪ್ರತಿಯೊಬ್ಬರು ಮಾಡಿಸಿಕೊಳ್ಳುವಂತೆ ಕ್ರಮ ವಹಿಸಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಮರು ನಿರ್ಮಾಣ ಮಾಡಲು ಹಾಗೂ ಹೊಸದಾಗಿ ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪಶು ವೈದ್ಯಕೀಯ ಆಸ್ಪತ್ರೆ, ಹಾಸ್ಟೆಲ್, ಶಾಲಾ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ ಎಂ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

2 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

17 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago