ಮನೆ ಮನೆಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್ ಯೋಜನೆ ಜಾರಿಗೆ ತರಲಾಗಿದ್ದು, ವಿಳಂಬ ಮಾಡದೇ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಕ್ರಮವಹಿಸಿ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಅವರು 1192 ಪ್ರದೇಶಗಳಲ್ಲಿ ಕಾಮಗಾರಿ ಕೈಗೊಂಡಿದ್ದು, ಕೆಲವು ಪ್ರದೇಶಗಳಲ್ಲಿ ಒವರ್ ಹೆಡ್ ಟ್ಯಾಂಕ್ ನಿರ್ಮಿಸಲು, ಕೊಳವೆ ಬಾವಿ ಕೊರೆಸಲು ವಿಳಂಬವಾಗಿದೆ. ಹೀಗಾಗಿ ಕಾಮಗಾರಿ ಪ್ರಗತಿ ವಿಳಂಬವಾಗುತ್ತಿದ್ದು, ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿ ಕುರಿತಂತೆ ಮಾಹಿತಿ ಪಡೆದ ಅವರು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಗುರುತಿಸಿರುವ ಜಾಗಗಳಲ್ಲಿ ಕೆಲವು ಕಡೆ ಕಾಮಗಾರಿ ಪ್ರಗತಿಯಲ್ಲಿದ್ದು, ದೇವನಹಳ್ಳಿ ಹಾಗೂ ವಿಜಯಪುರ ಟೌನ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಜಾಗ ಗುರ್ತಿಸಲ್ಪಟ್ಟಿದೆ. ಶೀಘ್ರವೇ ಕಾಮಗಾರಿ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದರು.
ಅನ್ನ ಭಾಗ್ಯ ಯೋಜನೆ ಅಡಿ 231009 ಫಲಾನುಭವಿಗಳಿದ್ದು ಅದರಲ್ಲಿ 170329 ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ನೇರವಾಗಿ 9,84,50,910/- ಕೋಟಿ ರೂಗಳು ಜುಲೈ ಮಾಹೆಯಲ್ಲಿ ಜಮೆಯಾಗಿದೆ. ಆಗಸ್ಟ್ ತಿಂಗಳ ಹಣ ಸಂದಾಯ ಪ್ರಗತಿಯಲ್ಲಿದೆ. ಉಳಿದಂತೆ ವಿವಿಧ ಕಾರಣಗಳಿಂದ ಹಣ ಜಮೆ ಆಗಿರದ ಫಲಾನುಭವಿಗಳಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ತಿಳಿಸಿ. ಸಮಸ್ಯೆ ಬಗೆಹರಿಸಿಕೊಂಡು ಮುಂದಿನ ಮಾಹೆಯೊಳಗೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿ. ಬಿ. ಟಿ ಮೂಲಕ ಜಮೆ ಮಾಡಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ನಮ್ಮ ಕ್ಲಿನಿಕ್ ಕಟ್ಟಡ ನಿರ್ಮಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಆಯುಷ್ಮಾನ್ ಕಾರ್ಡ್ ಗಳನ್ನು ಕುಟುಂಬದ ಪ್ರತಿಯೊಬ್ಬರು ಮಾಡಿಸಿಕೊಳ್ಳುವಂತೆ ಕ್ರಮ ವಹಿಸಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಮರು ನಿರ್ಮಾಣ ಮಾಡಲು ಹಾಗೂ ಹೊಸದಾಗಿ ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪಶು ವೈದ್ಯಕೀಯ ಆಸ್ಪತ್ರೆ, ಹಾಸ್ಟೆಲ್, ಶಾಲಾ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…