ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ನಾಮಫಲಕ ಅನಾವರಣ ಮಾಡುವ, ಯೋಜನೆಗೆ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಅವರು, ಜಲ ಮೂಲಗಳು ಸಾಮಾಜಿಕ ಜನಜೀವನದ ಮೇಲೆ ಪರಿಣಾಮ ಬೀರಲಿದ್ದು, ಕೆರೆ-ಕುಂಟೆ ಮೊದಲಾದ ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆಯಾಗಿದೆ ಎಂದರು.

ಕೆರೆಗಳನ್ನು ಪುನಶ್ವೇತನಗೊಳಿಸುವ ಕಾಮಗಾರಿಗಳಿಗೆ ಸರ್ಕಾರದೊಂದಿಗೆ ಸಮುದಾಯ ಸಹ ಕೈಜೋಡಿಸಬೇಕಿದೆ. 1982ರಲ್ಲಿ ಆರಂಭವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ರಾಜ್ಯದಲ್ಲಿ 914 ಕೆರೆಗಳ ಪುನಶ್ವೇತನಗೊಳಿಸಿರುವ ಪರಿಣಾಮ ಅಂತರ್ಜಲ ವೃದ್ಧಿಯಾಗುತ್ತಿದೆ. ಕೆರೆಗಳ ಅಭಿವೃದ್ದಿಯಾದಾಗ ಮಾತ್ರ ಅಂತರ್ಜಲ ಹೆಚ್ಚಿ ಕೊಳವೆ ಬಾವಿಗಳಲ್ಲಿ ನೀರು ತುಂಬುತ್ತದೆ. 1000 ಅಡಿಗೆ ಇಳಿದಿದ್ದ ಅಂತರ್ಜಲ ಈಗ 300 ರಿಂದ 400 ಅಡಿಗಳಿಗೆ ಬರುತ್ತಿದೆ. ಕೆರೆಗಳ ಅಭಿವೃದ್ದಿಯಾದಾಗ ಮಾತ್ರ ಗ್ರಾಮದಲ್ಲಿ ನೀರಾವರಿ ಅಭಿವೃದ್ದಿಯಾಗಲಿದ್ದು, ಕೆರೆಗಳನ್ನು ರಕ್ಷಣೆ ಮಾಡಿಕೊಳ್ಳುವುದು ಎಲ್ಲರ ಹೊಣೆಗಾರಿಕೆ ಎಂದರು.

ರೈತರಿಗೆ ಅನುಕೂಲವಾಗುವ ಹೈನುಗಾರಿಕೆ ಹಾಗೂ ಪುಷ್ಪೋದ್ಯಮಕ್ಕೆ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ನೆರವು ನೀಡಲಾಗುತ್ತಿದೆ. ರಾಜ್ಯದ ಬೀದ‌ರ್ ಜಿಲ್ಲೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ನೆರವು ನೀಡಿದ ಪರಿಣಾಮ 11 ಸಾವಿರ ಲೀ. ಇದ್ದ ಹಾಲಿನ ಉತ್ಪಾದನೆ ಈಗ 1.6 ಲಕ್ಷ ಆಗಿದೆ ಎಂದರು.

ಹಳೆಯ ಹಾಗೂ ಪುರಾತನ ದೇವಾಲಯಗಳನ್ನು ಸಂರಕ್ಷಿಸಿಕೊಳ್ಳುವ ಕಾರ್ಯವಾಗುತ್ತಿದ್ದು, ಭೂಗರ್ಭಹುದುಗಿರುವ ದೇವಾಲಯಗಳನ್ನು ಸಹ ಸಂರಕ್ಷಿಸಲಾಗುತ್ತಿದೆ. ಊರುಗಳಲ್ಲಿ ಭಕ್ತರಿದ್ದರೂ ದೇವರೇ ಅನಾಥರಾಗುತ್ತಿದ್ದಾರೆ. ಈ ದಿಸೆಯಲ್ಲಿ ದೇವಾಲಯದ ಜೀರ್ಣೋದ್ದಾರಕ್ಕೆ ಮುಂದಾಗಿದೆ ಎಂದರು.

ಮಾಜಿ ಸಚಿವೆ ರಾಣಿ ಸತೀಶ್ ಮಾತನಾಡಿ, ರಾಜಘಟ್ಟ ಗ್ರಾಮ ಇತಿಹಾಸ ಪ್ರಸಿದ್ಧವಾದ ಗ್ರಾಮವಾಗಿದೆ. ಈ ಗ್ರಾಮದಲ್ಲಿ ಕೆರೆ ಹೂಳೆತ್ತಿ ಇದರ ಹಸ್ತಾಂತರ ಕಾರ್ಯಕ್ರಮಕ್ಕೆ ವೀರೇಂದ್ರ ಹೆಗ್ಗಡೆಯವರು ಆಗಮಿಸಿರುವುದು ನಮ್ಮ ಗ್ರಾಮಕ್ಕೂ ಹಾಗೂ ತಾಲೂಕಿಗೂ ಹೆಮ್ಮೆಯ ವಿಷಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು, ವೀರೇಂದ್ರ ಹೆಗ್ಗಡೆ ಅವರ ಪುತ್ರಿ ಶ್ರದ್ಧಾ ಅಮಿತ್, ಕೆರೆ ಸಮಿತಿಯ ಅಧ್ಯಕ್ಷ ಆನಂದ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮುನಿರಾಜು, ಪ್ರಾದೇಶಿಕ ನಿರ್ದೇಶಶ್ ಶೀನಪ್ಪ ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಊರಿನ ಗ್ರಾಮಸ್ಥರು, ಸಂಘ-ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

11 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

11 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

12 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

12 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

15 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

18 hours ago