ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ನಾಮಫಲಕ ಅನಾವರಣ ಮಾಡುವ, ಯೋಜನೆಗೆ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಅವರು, ಜಲ ಮೂಲಗಳು ಸಾಮಾಜಿಕ ಜನಜೀವನದ ಮೇಲೆ ಪರಿಣಾಮ ಬೀರಲಿದ್ದು, ಕೆರೆ-ಕುಂಟೆ ಮೊದಲಾದ ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆಯಾಗಿದೆ ಎಂದರು.

ಕೆರೆಗಳನ್ನು ಪುನಶ್ವೇತನಗೊಳಿಸುವ ಕಾಮಗಾರಿಗಳಿಗೆ ಸರ್ಕಾರದೊಂದಿಗೆ ಸಮುದಾಯ ಸಹ ಕೈಜೋಡಿಸಬೇಕಿದೆ. 1982ರಲ್ಲಿ ಆರಂಭವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ರಾಜ್ಯದಲ್ಲಿ 914 ಕೆರೆಗಳ ಪುನಶ್ವೇತನಗೊಳಿಸಿರುವ ಪರಿಣಾಮ ಅಂತರ್ಜಲ ವೃದ್ಧಿಯಾಗುತ್ತಿದೆ. ಕೆರೆಗಳ ಅಭಿವೃದ್ದಿಯಾದಾಗ ಮಾತ್ರ ಅಂತರ್ಜಲ ಹೆಚ್ಚಿ ಕೊಳವೆ ಬಾವಿಗಳಲ್ಲಿ ನೀರು ತುಂಬುತ್ತದೆ. 1000 ಅಡಿಗೆ ಇಳಿದಿದ್ದ ಅಂತರ್ಜಲ ಈಗ 300 ರಿಂದ 400 ಅಡಿಗಳಿಗೆ ಬರುತ್ತಿದೆ. ಕೆರೆಗಳ ಅಭಿವೃದ್ದಿಯಾದಾಗ ಮಾತ್ರ ಗ್ರಾಮದಲ್ಲಿ ನೀರಾವರಿ ಅಭಿವೃದ್ದಿಯಾಗಲಿದ್ದು, ಕೆರೆಗಳನ್ನು ರಕ್ಷಣೆ ಮಾಡಿಕೊಳ್ಳುವುದು ಎಲ್ಲರ ಹೊಣೆಗಾರಿಕೆ ಎಂದರು.

ರೈತರಿಗೆ ಅನುಕೂಲವಾಗುವ ಹೈನುಗಾರಿಕೆ ಹಾಗೂ ಪುಷ್ಪೋದ್ಯಮಕ್ಕೆ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ನೆರವು ನೀಡಲಾಗುತ್ತಿದೆ. ರಾಜ್ಯದ ಬೀದ‌ರ್ ಜಿಲ್ಲೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ನೆರವು ನೀಡಿದ ಪರಿಣಾಮ 11 ಸಾವಿರ ಲೀ. ಇದ್ದ ಹಾಲಿನ ಉತ್ಪಾದನೆ ಈಗ 1.6 ಲಕ್ಷ ಆಗಿದೆ ಎಂದರು.

ಹಳೆಯ ಹಾಗೂ ಪುರಾತನ ದೇವಾಲಯಗಳನ್ನು ಸಂರಕ್ಷಿಸಿಕೊಳ್ಳುವ ಕಾರ್ಯವಾಗುತ್ತಿದ್ದು, ಭೂಗರ್ಭಹುದುಗಿರುವ ದೇವಾಲಯಗಳನ್ನು ಸಹ ಸಂರಕ್ಷಿಸಲಾಗುತ್ತಿದೆ. ಊರುಗಳಲ್ಲಿ ಭಕ್ತರಿದ್ದರೂ ದೇವರೇ ಅನಾಥರಾಗುತ್ತಿದ್ದಾರೆ. ಈ ದಿಸೆಯಲ್ಲಿ ದೇವಾಲಯದ ಜೀರ್ಣೋದ್ದಾರಕ್ಕೆ ಮುಂದಾಗಿದೆ ಎಂದರು.

ಮಾಜಿ ಸಚಿವೆ ರಾಣಿ ಸತೀಶ್ ಮಾತನಾಡಿ, ರಾಜಘಟ್ಟ ಗ್ರಾಮ ಇತಿಹಾಸ ಪ್ರಸಿದ್ಧವಾದ ಗ್ರಾಮವಾಗಿದೆ. ಈ ಗ್ರಾಮದಲ್ಲಿ ಕೆರೆ ಹೂಳೆತ್ತಿ ಇದರ ಹಸ್ತಾಂತರ ಕಾರ್ಯಕ್ರಮಕ್ಕೆ ವೀರೇಂದ್ರ ಹೆಗ್ಗಡೆಯವರು ಆಗಮಿಸಿರುವುದು ನಮ್ಮ ಗ್ರಾಮಕ್ಕೂ ಹಾಗೂ ತಾಲೂಕಿಗೂ ಹೆಮ್ಮೆಯ ವಿಷಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು, ವೀರೇಂದ್ರ ಹೆಗ್ಗಡೆ ಅವರ ಪುತ್ರಿ ಶ್ರದ್ಧಾ ಅಮಿತ್, ಕೆರೆ ಸಮಿತಿಯ ಅಧ್ಯಕ್ಷ ಆನಂದ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮುನಿರಾಜು, ಪ್ರಾದೇಶಿಕ ನಿರ್ದೇಶಶ್ ಶೀನಪ್ಪ ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಊರಿನ ಗ್ರಾಮಸ್ಥರು, ಸಂಘ-ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

2 hours ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

3 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

4 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

7 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

7 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

18 hours ago