ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ನಾಮಫಲಕ ಅನಾವರಣ ಮಾಡುವ, ಯೋಜನೆಗೆ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಅವರು, ಜಲ ಮೂಲಗಳು ಸಾಮಾಜಿಕ ಜನಜೀವನದ ಮೇಲೆ ಪರಿಣಾಮ ಬೀರಲಿದ್ದು, ಕೆರೆ-ಕುಂಟೆ ಮೊದಲಾದ ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆಯಾಗಿದೆ ಎಂದರು.

ಕೆರೆಗಳನ್ನು ಪುನಶ್ವೇತನಗೊಳಿಸುವ ಕಾಮಗಾರಿಗಳಿಗೆ ಸರ್ಕಾರದೊಂದಿಗೆ ಸಮುದಾಯ ಸಹ ಕೈಜೋಡಿಸಬೇಕಿದೆ. 1982ರಲ್ಲಿ ಆರಂಭವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ರಾಜ್ಯದಲ್ಲಿ 914 ಕೆರೆಗಳ ಪುನಶ್ವೇತನಗೊಳಿಸಿರುವ ಪರಿಣಾಮ ಅಂತರ್ಜಲ ವೃದ್ಧಿಯಾಗುತ್ತಿದೆ. ಕೆರೆಗಳ ಅಭಿವೃದ್ದಿಯಾದಾಗ ಮಾತ್ರ ಅಂತರ್ಜಲ ಹೆಚ್ಚಿ ಕೊಳವೆ ಬಾವಿಗಳಲ್ಲಿ ನೀರು ತುಂಬುತ್ತದೆ. 1000 ಅಡಿಗೆ ಇಳಿದಿದ್ದ ಅಂತರ್ಜಲ ಈಗ 300 ರಿಂದ 400 ಅಡಿಗಳಿಗೆ ಬರುತ್ತಿದೆ. ಕೆರೆಗಳ ಅಭಿವೃದ್ದಿಯಾದಾಗ ಮಾತ್ರ ಗ್ರಾಮದಲ್ಲಿ ನೀರಾವರಿ ಅಭಿವೃದ್ದಿಯಾಗಲಿದ್ದು, ಕೆರೆಗಳನ್ನು ರಕ್ಷಣೆ ಮಾಡಿಕೊಳ್ಳುವುದು ಎಲ್ಲರ ಹೊಣೆಗಾರಿಕೆ ಎಂದರು.

ರೈತರಿಗೆ ಅನುಕೂಲವಾಗುವ ಹೈನುಗಾರಿಕೆ ಹಾಗೂ ಪುಷ್ಪೋದ್ಯಮಕ್ಕೆ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ನೆರವು ನೀಡಲಾಗುತ್ತಿದೆ. ರಾಜ್ಯದ ಬೀದ‌ರ್ ಜಿಲ್ಲೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ನೆರವು ನೀಡಿದ ಪರಿಣಾಮ 11 ಸಾವಿರ ಲೀ. ಇದ್ದ ಹಾಲಿನ ಉತ್ಪಾದನೆ ಈಗ 1.6 ಲಕ್ಷ ಆಗಿದೆ ಎಂದರು.

ಹಳೆಯ ಹಾಗೂ ಪುರಾತನ ದೇವಾಲಯಗಳನ್ನು ಸಂರಕ್ಷಿಸಿಕೊಳ್ಳುವ ಕಾರ್ಯವಾಗುತ್ತಿದ್ದು, ಭೂಗರ್ಭಹುದುಗಿರುವ ದೇವಾಲಯಗಳನ್ನು ಸಹ ಸಂರಕ್ಷಿಸಲಾಗುತ್ತಿದೆ. ಊರುಗಳಲ್ಲಿ ಭಕ್ತರಿದ್ದರೂ ದೇವರೇ ಅನಾಥರಾಗುತ್ತಿದ್ದಾರೆ. ಈ ದಿಸೆಯಲ್ಲಿ ದೇವಾಲಯದ ಜೀರ್ಣೋದ್ದಾರಕ್ಕೆ ಮುಂದಾಗಿದೆ ಎಂದರು.

ಮಾಜಿ ಸಚಿವೆ ರಾಣಿ ಸತೀಶ್ ಮಾತನಾಡಿ, ರಾಜಘಟ್ಟ ಗ್ರಾಮ ಇತಿಹಾಸ ಪ್ರಸಿದ್ಧವಾದ ಗ್ರಾಮವಾಗಿದೆ. ಈ ಗ್ರಾಮದಲ್ಲಿ ಕೆರೆ ಹೂಳೆತ್ತಿ ಇದರ ಹಸ್ತಾಂತರ ಕಾರ್ಯಕ್ರಮಕ್ಕೆ ವೀರೇಂದ್ರ ಹೆಗ್ಗಡೆಯವರು ಆಗಮಿಸಿರುವುದು ನಮ್ಮ ಗ್ರಾಮಕ್ಕೂ ಹಾಗೂ ತಾಲೂಕಿಗೂ ಹೆಮ್ಮೆಯ ವಿಷಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು, ವೀರೇಂದ್ರ ಹೆಗ್ಗಡೆ ಅವರ ಪುತ್ರಿ ಶ್ರದ್ಧಾ ಅಮಿತ್, ಕೆರೆ ಸಮಿತಿಯ ಅಧ್ಯಕ್ಷ ಆನಂದ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮುನಿರಾಜು, ಪ್ರಾದೇಶಿಕ ನಿರ್ದೇಶಶ್ ಶೀನಪ್ಪ ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಊರಿನ ಗ್ರಾಮಸ್ಥರು, ಸಂಘ-ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

60 minutes ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

6 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

23 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

23 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago