ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ನಾಮಫಲಕ ಅನಾವರಣ ಮಾಡುವ, ಯೋಜನೆಗೆ ಶುಭ ಹಾರೈಸಿದರು.
ಬಳಿಕ ಮಾತನಾಡಿದ ಅವರು, ಜಲ ಮೂಲಗಳು ಸಾಮಾಜಿಕ ಜನಜೀವನದ ಮೇಲೆ ಪರಿಣಾಮ ಬೀರಲಿದ್ದು, ಕೆರೆ-ಕುಂಟೆ ಮೊದಲಾದ ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆಯಾಗಿದೆ ಎಂದರು.
ಕೆರೆಗಳನ್ನು ಪುನಶ್ವೇತನಗೊಳಿಸುವ ಕಾಮಗಾರಿಗಳಿಗೆ ಸರ್ಕಾರದೊಂದಿಗೆ ಸಮುದಾಯ ಸಹ ಕೈಜೋಡಿಸಬೇಕಿದೆ. 1982ರಲ್ಲಿ ಆರಂಭವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ರಾಜ್ಯದಲ್ಲಿ 914 ಕೆರೆಗಳ ಪುನಶ್ವೇತನಗೊಳಿಸಿರುವ ಪರಿಣಾಮ ಅಂತರ್ಜಲ ವೃದ್ಧಿಯಾಗುತ್ತಿದೆ. ಕೆರೆಗಳ ಅಭಿವೃದ್ದಿಯಾದಾಗ ಮಾತ್ರ ಅಂತರ್ಜಲ ಹೆಚ್ಚಿ ಕೊಳವೆ ಬಾವಿಗಳಲ್ಲಿ ನೀರು ತುಂಬುತ್ತದೆ. 1000 ಅಡಿಗೆ ಇಳಿದಿದ್ದ ಅಂತರ್ಜಲ ಈಗ 300 ರಿಂದ 400 ಅಡಿಗಳಿಗೆ ಬರುತ್ತಿದೆ. ಕೆರೆಗಳ ಅಭಿವೃದ್ದಿಯಾದಾಗ ಮಾತ್ರ ಗ್ರಾಮದಲ್ಲಿ ನೀರಾವರಿ ಅಭಿವೃದ್ದಿಯಾಗಲಿದ್ದು, ಕೆರೆಗಳನ್ನು ರಕ್ಷಣೆ ಮಾಡಿಕೊಳ್ಳುವುದು ಎಲ್ಲರ ಹೊಣೆಗಾರಿಕೆ ಎಂದರು.
ರೈತರಿಗೆ ಅನುಕೂಲವಾಗುವ ಹೈನುಗಾರಿಕೆ ಹಾಗೂ ಪುಷ್ಪೋದ್ಯಮಕ್ಕೆ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ನೆರವು ನೀಡಲಾಗುತ್ತಿದೆ. ರಾಜ್ಯದ ಬೀದರ್ ಜಿಲ್ಲೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ನೆರವು ನೀಡಿದ ಪರಿಣಾಮ 11 ಸಾವಿರ ಲೀ. ಇದ್ದ ಹಾಲಿನ ಉತ್ಪಾದನೆ ಈಗ 1.6 ಲಕ್ಷ ಆಗಿದೆ ಎಂದರು.
ಹಳೆಯ ಹಾಗೂ ಪುರಾತನ ದೇವಾಲಯಗಳನ್ನು ಸಂರಕ್ಷಿಸಿಕೊಳ್ಳುವ ಕಾರ್ಯವಾಗುತ್ತಿದ್ದು, ಭೂಗರ್ಭಹುದುಗಿರುವ ದೇವಾಲಯಗಳನ್ನು ಸಹ ಸಂರಕ್ಷಿಸಲಾಗುತ್ತಿದೆ. ಊರುಗಳಲ್ಲಿ ಭಕ್ತರಿದ್ದರೂ ದೇವರೇ ಅನಾಥರಾಗುತ್ತಿದ್ದಾರೆ. ಈ ದಿಸೆಯಲ್ಲಿ ದೇವಾಲಯದ ಜೀರ್ಣೋದ್ದಾರಕ್ಕೆ ಮುಂದಾಗಿದೆ ಎಂದರು.
ಮಾಜಿ ಸಚಿವೆ ರಾಣಿ ಸತೀಶ್ ಮಾತನಾಡಿ, ರಾಜಘಟ್ಟ ಗ್ರಾಮ ಇತಿಹಾಸ ಪ್ರಸಿದ್ಧವಾದ ಗ್ರಾಮವಾಗಿದೆ. ಈ ಗ್ರಾಮದಲ್ಲಿ ಕೆರೆ ಹೂಳೆತ್ತಿ ಇದರ ಹಸ್ತಾಂತರ ಕಾರ್ಯಕ್ರಮಕ್ಕೆ ವೀರೇಂದ್ರ ಹೆಗ್ಗಡೆಯವರು ಆಗಮಿಸಿರುವುದು ನಮ್ಮ ಗ್ರಾಮಕ್ಕೂ ಹಾಗೂ ತಾಲೂಕಿಗೂ ಹೆಮ್ಮೆಯ ವಿಷಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು, ವೀರೇಂದ್ರ ಹೆಗ್ಗಡೆ ಅವರ ಪುತ್ರಿ ಶ್ರದ್ಧಾ ಅಮಿತ್, ಕೆರೆ ಸಮಿತಿಯ ಅಧ್ಯಕ್ಷ ಆನಂದ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮುನಿರಾಜು, ಪ್ರಾದೇಶಿಕ ನಿರ್ದೇಶಶ್ ಶೀನಪ್ಪ ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಊರಿನ ಗ್ರಾಮಸ್ಥರು, ಸಂಘ-ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…