ಜವಾಹರ ನವೋದಯ ವಿದ್ಯಾಲಯ ಪ್ರವೇಶಾತಿ ಬಗ್ಗೆ ಸರ್ಕಾರಿ ಶಾಲಾ ಮಕ್ಕಳಿಗೆ ಜಾಗೃತಿ

ಜವಾಹರ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘ ಬೆಂಗಳೂರು ಮತ್ತು ನವೋದಯ ಚಾರಿಟಬಲ್ ಟ್ರಸ್ಟ್ ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ 2024 – 2025 ನೇ ಸಾಲಿನ ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ನವೋದಯ ಶಾಲೆಯ ಪ್ರಾಂಶುಪಾಲ ಆರ್. ಚಕ್ರವರ್ತಿ ಅವರು ನಗರದ ರೊಜಿಪುರ ಸರ್ಕಾರಿ ಶಾಲೆಯಲ್ಲಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಈ ಅಭಿಯಾನ ನವೋದಯ ಶಾಲೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅದರಲ್ಲೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶವಾಗಿದೆ ಎಂದರು.

ಉಚಿತ ಶಿಕ್ಷಣ, ವಸತಿ ಕಲ್ಪಿಸಲಾಗುವುದು, ಜವಾಹರ ನವೋದಯ ಶಾಲೆಗೆ ಪ್ರವೇಶ ಪಡೆಯಲು ಆ.10ರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿಸಿದರು.

ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘದ ಸಂಸ್ಥಾಪಕ ಅಧ್ಯಕ್ಷ ಸೋಮೇಶ್ ನವೋದಯ ಮಾತನಾಡಿ ಸರ್ಕಾರಿ ಶಾಲೆ ಮಕ್ಕಳಲ್ಲಿ ಈ ಒಂದು ಜಾಗೃತಿ ಅಭಿಯಾನ ರಾಜ್ಯಾದ್ಯಂತ ಮಾಡುತ್ತ ಬಂದಿದ್ದು ಹಳೆಯ ವಿದ್ಯಾರ್ಥಿಗಳು ಹಾಗು ಸ್ವಯಂ ಸೇವಕರು ಮುಂದೆ ಬಂದಲ್ಲಿ ಸರ್ಕಾರಿ ಶಾಲೆಗಳಲ್ಲಿ ಉಚಿತ ಕೋಚಿಂಗ್ ನೀಡಿ ಹೆಚ್ಚು ಸರ್ಕಾರಿ ಶಾಲೆ ಮಕ್ಕಳು ಪ್ರವೇಶ ಪರೀಕ್ಷೆಯಲಿ ಭಾಗವಹಿಸಿ ಆಯ್ಕೆ ಆಗುವಂತೆ ಮಾಡಲು ಈ ಕಾರ್ಯಕ್ರಮ ಅನುಕೂಲವಾಗುತ್ತದೆ ಎಂದರು.

ನವೋದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ ತಾಯಿಯ ಮಡಿಲು ಎಷ್ಟು ಸುರಕ್ಷತೆಯೋ ಅಷ್ಟೇ ನವೋದಯ ಶಾಲೆಯು ಸುರಕ್ಷಿತವಾಗಿರುತ್ತದೆ ಆದ ಕಾರಣ ಜಿಲ್ಲೆಯ ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶ ಪರೀಕ್ಷೆ ಬರೆಸಿ ನವೋದಯ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದರು.

ಅರ್ಜಿ ಸಲ್ಲಿಸುವಾಗ ಸೆಂಟ್ರಲ್ ನೊರ್ಮ್ಸ್ ಪ್ರಕಾರ ಜಾತಿ ಕಾಲಮ್ ಮತ್ತು ಗ್ರಾಮೀಣ ಅಥವಾ ನಗರ ಪ್ರದೇಶಗಳು ನೋಡಿಕೊಂಡು ಸರಿಯಾಗಿ ಭರ್ತಿ ಮಾಡಿ ಮಕ್ಕಳು ವೆರಿಫಿಕೇಷನ್ ನಲ್ಲಿ ರಿಜೆಕ್ಟ್ ಆಗದಂತೆ ಎಚ್ಚರ ವಹಿಸಿ ಎಂದರು.

ಕಾರ್ಯಕ್ರಮದಲ್ಲಿ ರೊಜಿಪುರ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀನಿವಾಸ್. ವಿ, ಸಿ.ಆರ್.ಪಿ ಬಸವರಾಜ್, ನವೋದಯ ಶಾಲೆಯ ಶಿಕ್ಷಕ ಗಿರಿ ಪ್ರಸಾದ್, ನವೋದಯ ಟ್ರಸ್ಟ್‌ನ ಕಾರ್ಯಕ್ರಮ ಸಂಯೋಜಕ ಜನಾರ್ಧನ, ನವೋದಯ ಶಾಲೆಯ ಹಳೆಯ ವಿದ್ಯಾರ್ಥಿ ಸುಪ್ರೀತ್ ಇದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

18 minutes ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

33 minutes ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

4 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

6 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

9 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

14 hours ago