ಜವಾಹರ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘ ಬೆಂಗಳೂರು ಮತ್ತು ನವೋದಯ ಚಾರಿಟಬಲ್ ಟ್ರಸ್ಟ್ ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ 2024 – 2025 ನೇ ಸಾಲಿನ ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ನವೋದಯ ಶಾಲೆಯ ಪ್ರಾಂಶುಪಾಲ ಆರ್. ಚಕ್ರವರ್ತಿ ಅವರು ನಗರದ ರೊಜಿಪುರ ಸರ್ಕಾರಿ ಶಾಲೆಯಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಈ ಅಭಿಯಾನ ನವೋದಯ ಶಾಲೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅದರಲ್ಲೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶವಾಗಿದೆ ಎಂದರು.
ಉಚಿತ ಶಿಕ್ಷಣ, ವಸತಿ ಕಲ್ಪಿಸಲಾಗುವುದು, ಜವಾಹರ ನವೋದಯ ಶಾಲೆಗೆ ಪ್ರವೇಶ ಪಡೆಯಲು ಆ.10ರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿಸಿದರು.
ನವೋದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ ತಾಯಿಯ ಮಡಿಲು ಎಷ್ಟು ಸುರಕ್ಷತೆಯೋ ಅಷ್ಟೇ ನವೋದಯ ಶಾಲೆಯು ಸುರಕ್ಷಿತವಾಗಿರುತ್ತದೆ ಆದ ಕಾರಣ ಜಿಲ್ಲೆಯ ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶ ಪರೀಕ್ಷೆ ಬರೆಸಿ ನವೋದಯ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದರು.
ಅರ್ಜಿ ಸಲ್ಲಿಸುವಾಗ ಸೆಂಟ್ರಲ್ ನೊರ್ಮ್ಸ್ ಪ್ರಕಾರ ಜಾತಿ ಕಾಲಮ್ ಮತ್ತು ಗ್ರಾಮೀಣ ಅಥವಾ ನಗರ ಪ್ರದೇಶಗಳು ನೋಡಿಕೊಂಡು ಸರಿಯಾಗಿ ಭರ್ತಿ ಮಾಡಿ ಮಕ್ಕಳು ವೆರಿಫಿಕೇಷನ್ ನಲ್ಲಿ ರಿಜೆಕ್ಟ್ ಆಗದಂತೆ ಎಚ್ಚರ ವಹಿಸಿ ಎಂದರು.
ಕಾರ್ಯಕ್ರಮದಲ್ಲಿ ರೊಜಿಪುರ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀನಿವಾಸ್. ವಿ, ಸಿ.ಆರ್.ಪಿ ಬಸವರಾಜ್, ನವೋದಯ ಶಾಲೆಯ ಶಿಕ್ಷಕ ಗಿರಿ ಪ್ರಸಾದ್, ನವೋದಯ ಟ್ರಸ್ಟ್ನ ಕಾರ್ಯಕ್ರಮ ಸಂಯೋಜಕ ಜನಾರ್ಧನ, ನವೋದಯ ಶಾಲೆಯ ಹಳೆಯ ವಿದ್ಯಾರ್ಥಿ ಸುಪ್ರೀತ್ ಇದ್ದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…