ಜವಾಹರ ನವೋದಯ ವಿದ್ಯಾಲಯ ಪ್ರವೇಶಾತಿ ಬಗ್ಗೆ ಸರ್ಕಾರಿ ಶಾಲಾ ಮಕ್ಕಳಿಗೆ ಜಾಗೃತಿ

ಜವಾಹರ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘ ಬೆಂಗಳೂರು ಮತ್ತು ನವೋದಯ ಚಾರಿಟಬಲ್ ಟ್ರಸ್ಟ್ ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ 2024 – 2025 ನೇ ಸಾಲಿನ ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ನವೋದಯ ಶಾಲೆಯ ಪ್ರಾಂಶುಪಾಲ ಆರ್. ಚಕ್ರವರ್ತಿ ಅವರು ನಗರದ ರೊಜಿಪುರ ಸರ್ಕಾರಿ ಶಾಲೆಯಲ್ಲಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಈ ಅಭಿಯಾನ ನವೋದಯ ಶಾಲೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅದರಲ್ಲೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶವಾಗಿದೆ ಎಂದರು.

ಉಚಿತ ಶಿಕ್ಷಣ, ವಸತಿ ಕಲ್ಪಿಸಲಾಗುವುದು, ಜವಾಹರ ನವೋದಯ ಶಾಲೆಗೆ ಪ್ರವೇಶ ಪಡೆಯಲು ಆ.10ರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿಸಿದರು.

ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘದ ಸಂಸ್ಥಾಪಕ ಅಧ್ಯಕ್ಷ ಸೋಮೇಶ್ ನವೋದಯ ಮಾತನಾಡಿ ಸರ್ಕಾರಿ ಶಾಲೆ ಮಕ್ಕಳಲ್ಲಿ ಈ ಒಂದು ಜಾಗೃತಿ ಅಭಿಯಾನ ರಾಜ್ಯಾದ್ಯಂತ ಮಾಡುತ್ತ ಬಂದಿದ್ದು ಹಳೆಯ ವಿದ್ಯಾರ್ಥಿಗಳು ಹಾಗು ಸ್ವಯಂ ಸೇವಕರು ಮುಂದೆ ಬಂದಲ್ಲಿ ಸರ್ಕಾರಿ ಶಾಲೆಗಳಲ್ಲಿ ಉಚಿತ ಕೋಚಿಂಗ್ ನೀಡಿ ಹೆಚ್ಚು ಸರ್ಕಾರಿ ಶಾಲೆ ಮಕ್ಕಳು ಪ್ರವೇಶ ಪರೀಕ್ಷೆಯಲಿ ಭಾಗವಹಿಸಿ ಆಯ್ಕೆ ಆಗುವಂತೆ ಮಾಡಲು ಈ ಕಾರ್ಯಕ್ರಮ ಅನುಕೂಲವಾಗುತ್ತದೆ ಎಂದರು.

ನವೋದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ ತಾಯಿಯ ಮಡಿಲು ಎಷ್ಟು ಸುರಕ್ಷತೆಯೋ ಅಷ್ಟೇ ನವೋದಯ ಶಾಲೆಯು ಸುರಕ್ಷಿತವಾಗಿರುತ್ತದೆ ಆದ ಕಾರಣ ಜಿಲ್ಲೆಯ ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶ ಪರೀಕ್ಷೆ ಬರೆಸಿ ನವೋದಯ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದರು.

ಅರ್ಜಿ ಸಲ್ಲಿಸುವಾಗ ಸೆಂಟ್ರಲ್ ನೊರ್ಮ್ಸ್ ಪ್ರಕಾರ ಜಾತಿ ಕಾಲಮ್ ಮತ್ತು ಗ್ರಾಮೀಣ ಅಥವಾ ನಗರ ಪ್ರದೇಶಗಳು ನೋಡಿಕೊಂಡು ಸರಿಯಾಗಿ ಭರ್ತಿ ಮಾಡಿ ಮಕ್ಕಳು ವೆರಿಫಿಕೇಷನ್ ನಲ್ಲಿ ರಿಜೆಕ್ಟ್ ಆಗದಂತೆ ಎಚ್ಚರ ವಹಿಸಿ ಎಂದರು.

ಕಾರ್ಯಕ್ರಮದಲ್ಲಿ ರೊಜಿಪುರ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀನಿವಾಸ್. ವಿ, ಸಿ.ಆರ್.ಪಿ ಬಸವರಾಜ್, ನವೋದಯ ಶಾಲೆಯ ಶಿಕ್ಷಕ ಗಿರಿ ಪ್ರಸಾದ್, ನವೋದಯ ಟ್ರಸ್ಟ್‌ನ ಕಾರ್ಯಕ್ರಮ ಸಂಯೋಜಕ ಜನಾರ್ಧನ, ನವೋದಯ ಶಾಲೆಯ ಹಳೆಯ ವಿದ್ಯಾರ್ಥಿ ಸುಪ್ರೀತ್ ಇದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

1 hour ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

3 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

3 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

4 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

8 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

9 hours ago