ಜವಾಹರ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘ ಬೆಂಗಳೂರು ಮತ್ತು ನವೋದಯ ಚಾರಿಟಬಲ್ ಟ್ರಸ್ಟ್ ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ 2024 – 2025 ನೇ ಸಾಲಿನ ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ನವೋದಯ ಶಾಲೆಯ ಪ್ರಾಂಶುಪಾಲ ಆರ್. ಚಕ್ರವರ್ತಿ ಅವರು ನಗರದ ರೊಜಿಪುರ ಸರ್ಕಾರಿ ಶಾಲೆಯಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಈ ಅಭಿಯಾನ ನವೋದಯ ಶಾಲೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅದರಲ್ಲೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶವಾಗಿದೆ ಎಂದರು.
ಉಚಿತ ಶಿಕ್ಷಣ, ವಸತಿ ಕಲ್ಪಿಸಲಾಗುವುದು, ಜವಾಹರ ನವೋದಯ ಶಾಲೆಗೆ ಪ್ರವೇಶ ಪಡೆಯಲು ಆ.10ರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿಸಿದರು.
ನವೋದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ ತಾಯಿಯ ಮಡಿಲು ಎಷ್ಟು ಸುರಕ್ಷತೆಯೋ ಅಷ್ಟೇ ನವೋದಯ ಶಾಲೆಯು ಸುರಕ್ಷಿತವಾಗಿರುತ್ತದೆ ಆದ ಕಾರಣ ಜಿಲ್ಲೆಯ ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶ ಪರೀಕ್ಷೆ ಬರೆಸಿ ನವೋದಯ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದರು.
ಅರ್ಜಿ ಸಲ್ಲಿಸುವಾಗ ಸೆಂಟ್ರಲ್ ನೊರ್ಮ್ಸ್ ಪ್ರಕಾರ ಜಾತಿ ಕಾಲಮ್ ಮತ್ತು ಗ್ರಾಮೀಣ ಅಥವಾ ನಗರ ಪ್ರದೇಶಗಳು ನೋಡಿಕೊಂಡು ಸರಿಯಾಗಿ ಭರ್ತಿ ಮಾಡಿ ಮಕ್ಕಳು ವೆರಿಫಿಕೇಷನ್ ನಲ್ಲಿ ರಿಜೆಕ್ಟ್ ಆಗದಂತೆ ಎಚ್ಚರ ವಹಿಸಿ ಎಂದರು.
ಕಾರ್ಯಕ್ರಮದಲ್ಲಿ ರೊಜಿಪುರ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀನಿವಾಸ್. ವಿ, ಸಿ.ಆರ್.ಪಿ ಬಸವರಾಜ್, ನವೋದಯ ಶಾಲೆಯ ಶಿಕ್ಷಕ ಗಿರಿ ಪ್ರಸಾದ್, ನವೋದಯ ಟ್ರಸ್ಟ್ನ ಕಾರ್ಯಕ್ರಮ ಸಂಯೋಜಕ ಜನಾರ್ಧನ, ನವೋದಯ ಶಾಲೆಯ ಹಳೆಯ ವಿದ್ಯಾರ್ಥಿ ಸುಪ್ರೀತ್ ಇದ್ದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…