ಜವಾಹರ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘ ಬೆಂಗಳೂರು ಮತ್ತು ನವೋದಯ ಚಾರಿಟಬಲ್ ಟ್ರಸ್ಟ್ ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ 2024 – 2025 ನೇ ಸಾಲಿನ ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ನವೋದಯ ಶಾಲೆಯ ಪ್ರಾಂಶುಪಾಲ ಆರ್. ಚಕ್ರವರ್ತಿ ಅವರು ನಗರದ ರೊಜಿಪುರ ಸರ್ಕಾರಿ ಶಾಲೆಯಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಈ ಅಭಿಯಾನ ನವೋದಯ ಶಾಲೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅದರಲ್ಲೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶವಾಗಿದೆ ಎಂದರು.
ಉಚಿತ ಶಿಕ್ಷಣ, ವಸತಿ ಕಲ್ಪಿಸಲಾಗುವುದು, ಜವಾಹರ ನವೋದಯ ಶಾಲೆಗೆ ಪ್ರವೇಶ ಪಡೆಯಲು ಆ.10ರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿಸಿದರು.
ನವೋದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ ತಾಯಿಯ ಮಡಿಲು ಎಷ್ಟು ಸುರಕ್ಷತೆಯೋ ಅಷ್ಟೇ ನವೋದಯ ಶಾಲೆಯು ಸುರಕ್ಷಿತವಾಗಿರುತ್ತದೆ ಆದ ಕಾರಣ ಜಿಲ್ಲೆಯ ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶ ಪರೀಕ್ಷೆ ಬರೆಸಿ ನವೋದಯ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದರು.
ಅರ್ಜಿ ಸಲ್ಲಿಸುವಾಗ ಸೆಂಟ್ರಲ್ ನೊರ್ಮ್ಸ್ ಪ್ರಕಾರ ಜಾತಿ ಕಾಲಮ್ ಮತ್ತು ಗ್ರಾಮೀಣ ಅಥವಾ ನಗರ ಪ್ರದೇಶಗಳು ನೋಡಿಕೊಂಡು ಸರಿಯಾಗಿ ಭರ್ತಿ ಮಾಡಿ ಮಕ್ಕಳು ವೆರಿಫಿಕೇಷನ್ ನಲ್ಲಿ ರಿಜೆಕ್ಟ್ ಆಗದಂತೆ ಎಚ್ಚರ ವಹಿಸಿ ಎಂದರು.
ಕಾರ್ಯಕ್ರಮದಲ್ಲಿ ರೊಜಿಪುರ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀನಿವಾಸ್. ವಿ, ಸಿ.ಆರ್.ಪಿ ಬಸವರಾಜ್, ನವೋದಯ ಶಾಲೆಯ ಶಿಕ್ಷಕ ಗಿರಿ ಪ್ರಸಾದ್, ನವೋದಯ ಟ್ರಸ್ಟ್ನ ಕಾರ್ಯಕ್ರಮ ಸಂಯೋಜಕ ಜನಾರ್ಧನ, ನವೋದಯ ಶಾಲೆಯ ಹಳೆಯ ವಿದ್ಯಾರ್ಥಿ ಸುಪ್ರೀತ್ ಇದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…