ಜವಾಹರ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘ ಬೆಂಗಳೂರು ಮತ್ತು ನವೋದಯ ಚಾರಿಟಬಲ್ ಟ್ರಸ್ಟ್ ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ 2024 – 2025 ನೇ ಸಾಲಿನ ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ನವೋದಯ ಶಾಲೆಯ ಪ್ರಾಂಶುಪಾಲ ಆರ್. ಚಕ್ರವರ್ತಿ ಅವರು ನಗರದ ರೊಜಿಪುರ ಸರ್ಕಾರಿ ಶಾಲೆಯಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಈ ಅಭಿಯಾನ ನವೋದಯ ಶಾಲೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅದರಲ್ಲೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶವಾಗಿದೆ ಎಂದರು.
ಉಚಿತ ಶಿಕ್ಷಣ, ವಸತಿ ಕಲ್ಪಿಸಲಾಗುವುದು, ಜವಾಹರ ನವೋದಯ ಶಾಲೆಗೆ ಪ್ರವೇಶ ಪಡೆಯಲು ಆ.10ರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿಸಿದರು.
ನವೋದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ ತಾಯಿಯ ಮಡಿಲು ಎಷ್ಟು ಸುರಕ್ಷತೆಯೋ ಅಷ್ಟೇ ನವೋದಯ ಶಾಲೆಯು ಸುರಕ್ಷಿತವಾಗಿರುತ್ತದೆ ಆದ ಕಾರಣ ಜಿಲ್ಲೆಯ ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶ ಪರೀಕ್ಷೆ ಬರೆಸಿ ನವೋದಯ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದರು.
ಅರ್ಜಿ ಸಲ್ಲಿಸುವಾಗ ಸೆಂಟ್ರಲ್ ನೊರ್ಮ್ಸ್ ಪ್ರಕಾರ ಜಾತಿ ಕಾಲಮ್ ಮತ್ತು ಗ್ರಾಮೀಣ ಅಥವಾ ನಗರ ಪ್ರದೇಶಗಳು ನೋಡಿಕೊಂಡು ಸರಿಯಾಗಿ ಭರ್ತಿ ಮಾಡಿ ಮಕ್ಕಳು ವೆರಿಫಿಕೇಷನ್ ನಲ್ಲಿ ರಿಜೆಕ್ಟ್ ಆಗದಂತೆ ಎಚ್ಚರ ವಹಿಸಿ ಎಂದರು.
ಕಾರ್ಯಕ್ರಮದಲ್ಲಿ ರೊಜಿಪುರ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀನಿವಾಸ್. ವಿ, ಸಿ.ಆರ್.ಪಿ ಬಸವರಾಜ್, ನವೋದಯ ಶಾಲೆಯ ಶಿಕ್ಷಕ ಗಿರಿ ಪ್ರಸಾದ್, ನವೋದಯ ಟ್ರಸ್ಟ್ನ ಕಾರ್ಯಕ್ರಮ ಸಂಯೋಜಕ ಜನಾರ್ಧನ, ನವೋದಯ ಶಾಲೆಯ ಹಳೆಯ ವಿದ್ಯಾರ್ಥಿ ಸುಪ್ರೀತ್ ಇದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…