ಜವಾಹರ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘ ಬೆಂಗಳೂರು ಮತ್ತು ನವೋದಯ ಚಾರಿಟಬಲ್ ಟ್ರಸ್ಟ್ ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ 2024 – 2025 ನೇ ಸಾಲಿನ ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ನವೋದಯ ಶಾಲೆಯ ಪ್ರಾಂಶುಪಾಲ ಆರ್. ಚಕ್ರವರ್ತಿ ಅವರು ನಗರದ ರೊಜಿಪುರ ಸರ್ಕಾರಿ ಶಾಲೆಯಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಈ ಅಭಿಯಾನ ನವೋದಯ ಶಾಲೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅದರಲ್ಲೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶವಾಗಿದೆ ಎಂದರು.
ಉಚಿತ ಶಿಕ್ಷಣ, ವಸತಿ ಕಲ್ಪಿಸಲಾಗುವುದು, ಜವಾಹರ ನವೋದಯ ಶಾಲೆಗೆ ಪ್ರವೇಶ ಪಡೆಯಲು ಆ.10ರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿಸಿದರು.
ನವೋದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ ತಾಯಿಯ ಮಡಿಲು ಎಷ್ಟು ಸುರಕ್ಷತೆಯೋ ಅಷ್ಟೇ ನವೋದಯ ಶಾಲೆಯು ಸುರಕ್ಷಿತವಾಗಿರುತ್ತದೆ ಆದ ಕಾರಣ ಜಿಲ್ಲೆಯ ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶ ಪರೀಕ್ಷೆ ಬರೆಸಿ ನವೋದಯ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದರು.
ಅರ್ಜಿ ಸಲ್ಲಿಸುವಾಗ ಸೆಂಟ್ರಲ್ ನೊರ್ಮ್ಸ್ ಪ್ರಕಾರ ಜಾತಿ ಕಾಲಮ್ ಮತ್ತು ಗ್ರಾಮೀಣ ಅಥವಾ ನಗರ ಪ್ರದೇಶಗಳು ನೋಡಿಕೊಂಡು ಸರಿಯಾಗಿ ಭರ್ತಿ ಮಾಡಿ ಮಕ್ಕಳು ವೆರಿಫಿಕೇಷನ್ ನಲ್ಲಿ ರಿಜೆಕ್ಟ್ ಆಗದಂತೆ ಎಚ್ಚರ ವಹಿಸಿ ಎಂದರು.
ಕಾರ್ಯಕ್ರಮದಲ್ಲಿ ರೊಜಿಪುರ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀನಿವಾಸ್. ವಿ, ಸಿ.ಆರ್.ಪಿ ಬಸವರಾಜ್, ನವೋದಯ ಶಾಲೆಯ ಶಿಕ್ಷಕ ಗಿರಿ ಪ್ರಸಾದ್, ನವೋದಯ ಟ್ರಸ್ಟ್ನ ಕಾರ್ಯಕ್ರಮ ಸಂಯೋಜಕ ಜನಾರ್ಧನ, ನವೋದಯ ಶಾಲೆಯ ಹಳೆಯ ವಿದ್ಯಾರ್ಥಿ ಸುಪ್ರೀತ್ ಇದ್ದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…