ಜವಾಹರ ನವೋದಯ ವಿದ್ಯಾಲಯ ದೊಡ್ಡಬಳ್ಳಾಪುರ, ಕರ್ನಾಟಕ ನವೋದಯ ವಿದ್ಯಾರ್ಥಿ ಸಂಘ ಬೆಂಗಳೂರು ಮತ್ತು ನವೋದಯ ಚಾರಿಟಬಲ್ ಟ್ರಸ್ಟ್ ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ 2024 – 2025 ನೇ ಸಾಲಿನ ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ನವೋದಯ ಶಾಲೆಯ ಪ್ರಾಂಶುಪಾಲ ಆರ್. ಚಕ್ರವರ್ತಿ ಅವರು ನಗರದ ರೊಜಿಪುರ ಸರ್ಕಾರಿ ಶಾಲೆಯಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಈ ಅಭಿಯಾನ ನವೋದಯ ಶಾಲೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅದರಲ್ಲೂ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಮುಖ್ಯ ಉದ್ದೇಶವಾಗಿದೆ ಎಂದರು.
ಉಚಿತ ಶಿಕ್ಷಣ, ವಸತಿ ಕಲ್ಪಿಸಲಾಗುವುದು, ಜವಾಹರ ನವೋದಯ ಶಾಲೆಗೆ ಪ್ರವೇಶ ಪಡೆಯಲು ಆ.10ರೊಳಗೆ ಅರ್ಜಿ ಸಲ್ಲಿಸಬೇಕಾಗಿ ವಿನಂತಿಸಿದರು.
ನವೋದಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ ತಾಯಿಯ ಮಡಿಲು ಎಷ್ಟು ಸುರಕ್ಷತೆಯೋ ಅಷ್ಟೇ ನವೋದಯ ಶಾಲೆಯು ಸುರಕ್ಷಿತವಾಗಿರುತ್ತದೆ ಆದ ಕಾರಣ ಜಿಲ್ಲೆಯ ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶ ಪರೀಕ್ಷೆ ಬರೆಸಿ ನವೋದಯ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದರು.
ಅರ್ಜಿ ಸಲ್ಲಿಸುವಾಗ ಸೆಂಟ್ರಲ್ ನೊರ್ಮ್ಸ್ ಪ್ರಕಾರ ಜಾತಿ ಕಾಲಮ್ ಮತ್ತು ಗ್ರಾಮೀಣ ಅಥವಾ ನಗರ ಪ್ರದೇಶಗಳು ನೋಡಿಕೊಂಡು ಸರಿಯಾಗಿ ಭರ್ತಿ ಮಾಡಿ ಮಕ್ಕಳು ವೆರಿಫಿಕೇಷನ್ ನಲ್ಲಿ ರಿಜೆಕ್ಟ್ ಆಗದಂತೆ ಎಚ್ಚರ ವಹಿಸಿ ಎಂದರು.
ಕಾರ್ಯಕ್ರಮದಲ್ಲಿ ರೊಜಿಪುರ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀನಿವಾಸ್. ವಿ, ಸಿ.ಆರ್.ಪಿ ಬಸವರಾಜ್, ನವೋದಯ ಶಾಲೆಯ ಶಿಕ್ಷಕ ಗಿರಿ ಪ್ರಸಾದ್, ನವೋದಯ ಟ್ರಸ್ಟ್ನ ಕಾರ್ಯಕ್ರಮ ಸಂಯೋಜಕ ಜನಾರ್ಧನ, ನವೋದಯ ಶಾಲೆಯ ಹಳೆಯ ವಿದ್ಯಾರ್ಥಿ ಸುಪ್ರೀತ್ ಇದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…