ಜಾಗತೀಕರಣ, ವಿಜ್ಞಾನ- ತಂತ್ರಜ್ಞಾನ ಬೆಳೆದಂತೆ ‘ಅಂಗೈಯಲ್ಲೇ ಪ್ರಪಂಚ ‘ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಹೇಳಿದರು.
ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಅವರು ಮಾತನಾಡಿದರು, ಮೊಬೈಲ್ ಎಂಬುದು ಆಧುನಿಕ ಯುಗದ ಬಹುದೊಡ್ಡ ಆವಿಷ್ಕಾರವೆನಿಸಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಸಾಕಷ್ಟು ಜ್ಞಾನ ಸಂಪಾದನೆ ಮಾಡಬಹುದು ಎಂದರು.
ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಎಂಎಸ್ ವಿ ಪಬ್ಲಿಕ್ ಶಾಲೆ ಸತತ 16 ವರ್ಷಗಳಿಂದಲೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿಶತ ಫಲಿತಾಂಶ ದಾಖಲಿಸುವ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಇಂದು ದೇಶದ ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿ ದೇಶ ಸೇವೆ ಮಾಡುತ್ತಿರುವುದು ನೋಡಿದರೆ ಶಾಲೆಯಲ್ಲಿ ಸಿಗುವ ಶಿಕ್ಷಣ ಎಂತಹದ್ದು ಎಂಬುದು ಅರ್ಥವಾಗುತ್ತದೆ ಎಂದರು.
ಖ್ಯಾತ ಇತಿಹಾಸ ತಜ್ಞ, ಮೈಸೂರಿನ ಕಥೆಗಳು ಲೇಖಕರಾದ ಧರ್ಮೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಗುರಿ ಇರಬೇಕು. ಗುರಿಯಿಲ್ಲದ ಜೀವನ , ಸೂತ್ರವಿಲ್ಲದ ಗಾಳಿ ಪಟ ಎರಡು ಒಂದೇ. ಹೀಗಾಗಿ ವಿದ್ಯಾರ್ಥಿಗಳು ನಿಮ್ಮ ಸುಂದರವಾದ ಭವಿಷ್ಯದ ಕುರಿತು ಗುರಿ ಇಟ್ಟುಕೊಳ್ಳಬೇಕು ಎಂದು ಸರ್ .ಎಂ ವಿಶ್ವೇಶ್ವರಯ್ಯ ನವರ ಜೀವನದ ಒಂದು ಸಣ್ಣ ಘಟನೆಯನ್ನು ಉದಾಹರಣೆಯಾಗಿ ನೀಡಿದರು.
ಕಾರ್ಯ ಕ್ರಮದ ಅಂಗವಾಗಿ ನಮ್ಮ ದೇಶದ ಸಂಸ್ಕೃತಿ, ಆಚಾರ ,ವಿಚಾರ, ಜನಪದ, ಸಾಹಿತ್ಯ ಬಿಂಬಿಸುವ ಆಕರ್ಷಕ ನೃತ್ಯ ಕಾರ್ಯಕ್ರಮ ಪೋಷಕರನ್ನು ಮನಸೂರೆಗೊಳಿಸಿತು.
ಪೋಷಕರು ವೇದಿಕೆಯ ಮೇಲೆ ತಮ್ಮ ಮಕ್ಕಳ ಪ್ರತಿಭೆ ವೀಕ್ಷಿಸಿ ಸಂತಸಪಟ್ಟರು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಹ್ಮಣ್ಯ, ಉಪಾಧ್ಯಕ್ಷ ಸ್ವರೂಪ್, ಟ್ರಸ್ಟಿಗಳಾದ ನಯನಾ ಸ್ವರೂಪ್ ,ಶಾಲಾ ಪ್ರಾಂಶುಪಾಲರಾದ ರೆಮ್ಯ ಬಿ.ವಿ, ವಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…