ಜಾಗತೀಕರಣ, ವಿಜ್ಞಾನ- ತಂತ್ರಜ್ಞಾನ ಬೆಳೆದಂತೆ ‘ಅಂಗೈಯಲ್ಲೇ ಪ್ರಪಂಚ ‘ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಹೇಳಿದರು.
ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಅವರು ಮಾತನಾಡಿದರು, ಮೊಬೈಲ್ ಎಂಬುದು ಆಧುನಿಕ ಯುಗದ ಬಹುದೊಡ್ಡ ಆವಿಷ್ಕಾರವೆನಿಸಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಸಾಕಷ್ಟು ಜ್ಞಾನ ಸಂಪಾದನೆ ಮಾಡಬಹುದು ಎಂದರು.
ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಎಂಎಸ್ ವಿ ಪಬ್ಲಿಕ್ ಶಾಲೆ ಸತತ 16 ವರ್ಷಗಳಿಂದಲೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿಶತ ಫಲಿತಾಂಶ ದಾಖಲಿಸುವ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಇಂದು ದೇಶದ ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿ ದೇಶ ಸೇವೆ ಮಾಡುತ್ತಿರುವುದು ನೋಡಿದರೆ ಶಾಲೆಯಲ್ಲಿ ಸಿಗುವ ಶಿಕ್ಷಣ ಎಂತಹದ್ದು ಎಂಬುದು ಅರ್ಥವಾಗುತ್ತದೆ ಎಂದರು.
ಖ್ಯಾತ ಇತಿಹಾಸ ತಜ್ಞ, ಮೈಸೂರಿನ ಕಥೆಗಳು ಲೇಖಕರಾದ ಧರ್ಮೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಗುರಿ ಇರಬೇಕು. ಗುರಿಯಿಲ್ಲದ ಜೀವನ , ಸೂತ್ರವಿಲ್ಲದ ಗಾಳಿ ಪಟ ಎರಡು ಒಂದೇ. ಹೀಗಾಗಿ ವಿದ್ಯಾರ್ಥಿಗಳು ನಿಮ್ಮ ಸುಂದರವಾದ ಭವಿಷ್ಯದ ಕುರಿತು ಗುರಿ ಇಟ್ಟುಕೊಳ್ಳಬೇಕು ಎಂದು ಸರ್ .ಎಂ ವಿಶ್ವೇಶ್ವರಯ್ಯ ನವರ ಜೀವನದ ಒಂದು ಸಣ್ಣ ಘಟನೆಯನ್ನು ಉದಾಹರಣೆಯಾಗಿ ನೀಡಿದರು.
ಕಾರ್ಯ ಕ್ರಮದ ಅಂಗವಾಗಿ ನಮ್ಮ ದೇಶದ ಸಂಸ್ಕೃತಿ, ಆಚಾರ ,ವಿಚಾರ, ಜನಪದ, ಸಾಹಿತ್ಯ ಬಿಂಬಿಸುವ ಆಕರ್ಷಕ ನೃತ್ಯ ಕಾರ್ಯಕ್ರಮ ಪೋಷಕರನ್ನು ಮನಸೂರೆಗೊಳಿಸಿತು.
ಪೋಷಕರು ವೇದಿಕೆಯ ಮೇಲೆ ತಮ್ಮ ಮಕ್ಕಳ ಪ್ರತಿಭೆ ವೀಕ್ಷಿಸಿ ಸಂತಸಪಟ್ಟರು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಹ್ಮಣ್ಯ, ಉಪಾಧ್ಯಕ್ಷ ಸ್ವರೂಪ್, ಟ್ರಸ್ಟಿಗಳಾದ ನಯನಾ ಸ್ವರೂಪ್ ,ಶಾಲಾ ಪ್ರಾಂಶುಪಾಲರಾದ ರೆಮ್ಯ ಬಿ.ವಿ, ವಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…
ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…
ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…
ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…
ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…
ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…