ಜಾಗತೀಕರಣ, ವಿಜ್ಞಾನ- ತಂತ್ರಜ್ಞಾನ ಬೆಳೆದಂತೆ ‘ಅಂಗೈಯಲ್ಲೇ ಪ್ರಪಂಚ ‘ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಹೇಳಿದರು.
ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಅವರು ಮಾತನಾಡಿದರು, ಮೊಬೈಲ್ ಎಂಬುದು ಆಧುನಿಕ ಯುಗದ ಬಹುದೊಡ್ಡ ಆವಿಷ್ಕಾರವೆನಿಸಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಸಾಕಷ್ಟು ಜ್ಞಾನ ಸಂಪಾದನೆ ಮಾಡಬಹುದು ಎಂದರು.
ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಎಂಎಸ್ ವಿ ಪಬ್ಲಿಕ್ ಶಾಲೆ ಸತತ 16 ವರ್ಷಗಳಿಂದಲೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿಶತ ಫಲಿತಾಂಶ ದಾಖಲಿಸುವ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಇಂದು ದೇಶದ ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿ ದೇಶ ಸೇವೆ ಮಾಡುತ್ತಿರುವುದು ನೋಡಿದರೆ ಶಾಲೆಯಲ್ಲಿ ಸಿಗುವ ಶಿಕ್ಷಣ ಎಂತಹದ್ದು ಎಂಬುದು ಅರ್ಥವಾಗುತ್ತದೆ ಎಂದರು.
ಖ್ಯಾತ ಇತಿಹಾಸ ತಜ್ಞ, ಮೈಸೂರಿನ ಕಥೆಗಳು ಲೇಖಕರಾದ ಧರ್ಮೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಗುರಿ ಇರಬೇಕು. ಗುರಿಯಿಲ್ಲದ ಜೀವನ , ಸೂತ್ರವಿಲ್ಲದ ಗಾಳಿ ಪಟ ಎರಡು ಒಂದೇ. ಹೀಗಾಗಿ ವಿದ್ಯಾರ್ಥಿಗಳು ನಿಮ್ಮ ಸುಂದರವಾದ ಭವಿಷ್ಯದ ಕುರಿತು ಗುರಿ ಇಟ್ಟುಕೊಳ್ಳಬೇಕು ಎಂದು ಸರ್ .ಎಂ ವಿಶ್ವೇಶ್ವರಯ್ಯ ನವರ ಜೀವನದ ಒಂದು ಸಣ್ಣ ಘಟನೆಯನ್ನು ಉದಾಹರಣೆಯಾಗಿ ನೀಡಿದರು.
ಕಾರ್ಯ ಕ್ರಮದ ಅಂಗವಾಗಿ ನಮ್ಮ ದೇಶದ ಸಂಸ್ಕೃತಿ, ಆಚಾರ ,ವಿಚಾರ, ಜನಪದ, ಸಾಹಿತ್ಯ ಬಿಂಬಿಸುವ ಆಕರ್ಷಕ ನೃತ್ಯ ಕಾರ್ಯಕ್ರಮ ಪೋಷಕರನ್ನು ಮನಸೂರೆಗೊಳಿಸಿತು.
ಪೋಷಕರು ವೇದಿಕೆಯ ಮೇಲೆ ತಮ್ಮ ಮಕ್ಕಳ ಪ್ರತಿಭೆ ವೀಕ್ಷಿಸಿ ಸಂತಸಪಟ್ಟರು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಹ್ಮಣ್ಯ, ಉಪಾಧ್ಯಕ್ಷ ಸ್ವರೂಪ್, ಟ್ರಸ್ಟಿಗಳಾದ ನಯನಾ ಸ್ವರೂಪ್ ,ಶಾಲಾ ಪ್ರಾಂಶುಪಾಲರಾದ ರೆಮ್ಯ ಬಿ.ವಿ, ವಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…