ಜಾಗತೀಕರಣ, ವಿಜ್ಞಾನ- ತಂತ್ರಜ್ಞಾನ ಬೆಳೆದಂತೆ ‘ಅಂಗೈಯಲ್ಲೇ ಪ್ರಪಂಚ ‘ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಹೇಳಿದರು.
ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಅವರು ಮಾತನಾಡಿದರು, ಮೊಬೈಲ್ ಎಂಬುದು ಆಧುನಿಕ ಯುಗದ ಬಹುದೊಡ್ಡ ಆವಿಷ್ಕಾರವೆನಿಸಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಸಾಕಷ್ಟು ಜ್ಞಾನ ಸಂಪಾದನೆ ಮಾಡಬಹುದು ಎಂದರು.
ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಎಂಎಸ್ ವಿ ಪಬ್ಲಿಕ್ ಶಾಲೆ ಸತತ 16 ವರ್ಷಗಳಿಂದಲೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿಶತ ಫಲಿತಾಂಶ ದಾಖಲಿಸುವ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಇಂದು ದೇಶದ ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿ ದೇಶ ಸೇವೆ ಮಾಡುತ್ತಿರುವುದು ನೋಡಿದರೆ ಶಾಲೆಯಲ್ಲಿ ಸಿಗುವ ಶಿಕ್ಷಣ ಎಂತಹದ್ದು ಎಂಬುದು ಅರ್ಥವಾಗುತ್ತದೆ ಎಂದರು.
ಖ್ಯಾತ ಇತಿಹಾಸ ತಜ್ಞ, ಮೈಸೂರಿನ ಕಥೆಗಳು ಲೇಖಕರಾದ ಧರ್ಮೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಗುರಿ ಇರಬೇಕು. ಗುರಿಯಿಲ್ಲದ ಜೀವನ , ಸೂತ್ರವಿಲ್ಲದ ಗಾಳಿ ಪಟ ಎರಡು ಒಂದೇ. ಹೀಗಾಗಿ ವಿದ್ಯಾರ್ಥಿಗಳು ನಿಮ್ಮ ಸುಂದರವಾದ ಭವಿಷ್ಯದ ಕುರಿತು ಗುರಿ ಇಟ್ಟುಕೊಳ್ಳಬೇಕು ಎಂದು ಸರ್ .ಎಂ ವಿಶ್ವೇಶ್ವರಯ್ಯ ನವರ ಜೀವನದ ಒಂದು ಸಣ್ಣ ಘಟನೆಯನ್ನು ಉದಾಹರಣೆಯಾಗಿ ನೀಡಿದರು.
ಕಾರ್ಯ ಕ್ರಮದ ಅಂಗವಾಗಿ ನಮ್ಮ ದೇಶದ ಸಂಸ್ಕೃತಿ, ಆಚಾರ ,ವಿಚಾರ, ಜನಪದ, ಸಾಹಿತ್ಯ ಬಿಂಬಿಸುವ ಆಕರ್ಷಕ ನೃತ್ಯ ಕಾರ್ಯಕ್ರಮ ಪೋಷಕರನ್ನು ಮನಸೂರೆಗೊಳಿಸಿತು.
ಪೋಷಕರು ವೇದಿಕೆಯ ಮೇಲೆ ತಮ್ಮ ಮಕ್ಕಳ ಪ್ರತಿಭೆ ವೀಕ್ಷಿಸಿ ಸಂತಸಪಟ್ಟರು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಹ್ಮಣ್ಯ, ಉಪಾಧ್ಯಕ್ಷ ಸ್ವರೂಪ್, ಟ್ರಸ್ಟಿಗಳಾದ ನಯನಾ ಸ್ವರೂಪ್ ,ಶಾಲಾ ಪ್ರಾಂಶುಪಾಲರಾದ ರೆಮ್ಯ ಬಿ.ವಿ, ವಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…