ಜಾಗತೀಕರಣ, ವಿಜ್ಞಾನ- ತಂತ್ರಜ್ಞಾನ ಬೆಳೆದಂತೆ ‘ಅಂಗೈಯಲ್ಲೇ ಪ್ರಪಂಚ ‘ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಹೇಳಿದರು.
ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಅವರು ಮಾತನಾಡಿದರು, ಮೊಬೈಲ್ ಎಂಬುದು ಆಧುನಿಕ ಯುಗದ ಬಹುದೊಡ್ಡ ಆವಿಷ್ಕಾರವೆನಿಸಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಸಾಕಷ್ಟು ಜ್ಞಾನ ಸಂಪಾದನೆ ಮಾಡಬಹುದು ಎಂದರು.
ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಎಂಎಸ್ ವಿ ಪಬ್ಲಿಕ್ ಶಾಲೆ ಸತತ 16 ವರ್ಷಗಳಿಂದಲೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿಶತ ಫಲಿತಾಂಶ ದಾಖಲಿಸುವ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಇಂದು ದೇಶದ ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿ ದೇಶ ಸೇವೆ ಮಾಡುತ್ತಿರುವುದು ನೋಡಿದರೆ ಶಾಲೆಯಲ್ಲಿ ಸಿಗುವ ಶಿಕ್ಷಣ ಎಂತಹದ್ದು ಎಂಬುದು ಅರ್ಥವಾಗುತ್ತದೆ ಎಂದರು.
ಖ್ಯಾತ ಇತಿಹಾಸ ತಜ್ಞ, ಮೈಸೂರಿನ ಕಥೆಗಳು ಲೇಖಕರಾದ ಧರ್ಮೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಗುರಿ ಇರಬೇಕು. ಗುರಿಯಿಲ್ಲದ ಜೀವನ , ಸೂತ್ರವಿಲ್ಲದ ಗಾಳಿ ಪಟ ಎರಡು ಒಂದೇ. ಹೀಗಾಗಿ ವಿದ್ಯಾರ್ಥಿಗಳು ನಿಮ್ಮ ಸುಂದರವಾದ ಭವಿಷ್ಯದ ಕುರಿತು ಗುರಿ ಇಟ್ಟುಕೊಳ್ಳಬೇಕು ಎಂದು ಸರ್ .ಎಂ ವಿಶ್ವೇಶ್ವರಯ್ಯ ನವರ ಜೀವನದ ಒಂದು ಸಣ್ಣ ಘಟನೆಯನ್ನು ಉದಾಹರಣೆಯಾಗಿ ನೀಡಿದರು.
ಕಾರ್ಯ ಕ್ರಮದ ಅಂಗವಾಗಿ ನಮ್ಮ ದೇಶದ ಸಂಸ್ಕೃತಿ, ಆಚಾರ ,ವಿಚಾರ, ಜನಪದ, ಸಾಹಿತ್ಯ ಬಿಂಬಿಸುವ ಆಕರ್ಷಕ ನೃತ್ಯ ಕಾರ್ಯಕ್ರಮ ಪೋಷಕರನ್ನು ಮನಸೂರೆಗೊಳಿಸಿತು.
ಪೋಷಕರು ವೇದಿಕೆಯ ಮೇಲೆ ತಮ್ಮ ಮಕ್ಕಳ ಪ್ರತಿಭೆ ವೀಕ್ಷಿಸಿ ಸಂತಸಪಟ್ಟರು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಹ್ಮಣ್ಯ, ಉಪಾಧ್ಯಕ್ಷ ಸ್ವರೂಪ್, ಟ್ರಸ್ಟಿಗಳಾದ ನಯನಾ ಸ್ವರೂಪ್ ,ಶಾಲಾ ಪ್ರಾಂಶುಪಾಲರಾದ ರೆಮ್ಯ ಬಿ.ವಿ, ವಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…