ಜಾಗತೀಕರಣ, ವಿಜ್ಞಾನ- ತಂತ್ರಜ್ಞಾನ ಬೆಳೆದಂತೆ ‘ಅಂಗೈಯಲ್ಲೇ ಪ್ರಪಂಚ ‘ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಹೇಳಿದರು.
ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಅವರು ಮಾತನಾಡಿದರು, ಮೊಬೈಲ್ ಎಂಬುದು ಆಧುನಿಕ ಯುಗದ ಬಹುದೊಡ್ಡ ಆವಿಷ್ಕಾರವೆನಿಸಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ಸಾಕಷ್ಟು ಜ್ಞಾನ ಸಂಪಾದನೆ ಮಾಡಬಹುದು ಎಂದರು.
ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಎಂಎಸ್ ವಿ ಪಬ್ಲಿಕ್ ಶಾಲೆ ಸತತ 16 ವರ್ಷಗಳಿಂದಲೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿಶತ ಫಲಿತಾಂಶ ದಾಖಲಿಸುವ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಇಂದು ದೇಶದ ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿ ದೇಶ ಸೇವೆ ಮಾಡುತ್ತಿರುವುದು ನೋಡಿದರೆ ಶಾಲೆಯಲ್ಲಿ ಸಿಗುವ ಶಿಕ್ಷಣ ಎಂತಹದ್ದು ಎಂಬುದು ಅರ್ಥವಾಗುತ್ತದೆ ಎಂದರು.
ಖ್ಯಾತ ಇತಿಹಾಸ ತಜ್ಞ, ಮೈಸೂರಿನ ಕಥೆಗಳು ಲೇಖಕರಾದ ಧರ್ಮೇಂದ್ರ ಕುಮಾರ್ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಗುರಿ ಇರಬೇಕು. ಗುರಿಯಿಲ್ಲದ ಜೀವನ , ಸೂತ್ರವಿಲ್ಲದ ಗಾಳಿ ಪಟ ಎರಡು ಒಂದೇ. ಹೀಗಾಗಿ ವಿದ್ಯಾರ್ಥಿಗಳು ನಿಮ್ಮ ಸುಂದರವಾದ ಭವಿಷ್ಯದ ಕುರಿತು ಗುರಿ ಇಟ್ಟುಕೊಳ್ಳಬೇಕು ಎಂದು ಸರ್ .ಎಂ ವಿಶ್ವೇಶ್ವರಯ್ಯ ನವರ ಜೀವನದ ಒಂದು ಸಣ್ಣ ಘಟನೆಯನ್ನು ಉದಾಹರಣೆಯಾಗಿ ನೀಡಿದರು.
ಕಾರ್ಯ ಕ್ರಮದ ಅಂಗವಾಗಿ ನಮ್ಮ ದೇಶದ ಸಂಸ್ಕೃತಿ, ಆಚಾರ ,ವಿಚಾರ, ಜನಪದ, ಸಾಹಿತ್ಯ ಬಿಂಬಿಸುವ ಆಕರ್ಷಕ ನೃತ್ಯ ಕಾರ್ಯಕ್ರಮ ಪೋಷಕರನ್ನು ಮನಸೂರೆಗೊಳಿಸಿತು.
ಪೋಷಕರು ವೇದಿಕೆಯ ಮೇಲೆ ತಮ್ಮ ಮಕ್ಕಳ ಪ್ರತಿಭೆ ವೀಕ್ಷಿಸಿ ಸಂತಸಪಟ್ಟರು.
ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಹ್ಮಣ್ಯ, ಉಪಾಧ್ಯಕ್ಷ ಸ್ವರೂಪ್, ಟ್ರಸ್ಟಿಗಳಾದ ನಯನಾ ಸ್ವರೂಪ್ ,ಶಾಲಾ ಪ್ರಾಂಶುಪಾಲರಾದ ರೆಮ್ಯ ಬಿ.ವಿ, ವಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…