Categories: ಲೇಖನ

ಜಾಗೃತ ಮನಸ್ಸುಗಳ ಜವಾಬ್ದಾರಿ…….

ಚಳಿ ತಡೆಯಲಾರದೆ ರಸ್ತೆ ಬದಿಯಲ್ಲಿ ಮಲಗಿರುವ ಮಗು,

ಒಂದು ತುತ್ತು ಅನ್ನಕ್ಕಾಗಿ ದೇವ ಮಂದಿರಗಳ ಮುಂದೆ
ಹಸಿವಿನಿಂದ ಅಂಗಲಾಚುತ್ತಿರುವ ಪುಟ್ಟ ಕಂದ,

ತನ್ನ ಹಾಗೂ ತನ್ನ ನಂಬಿದವರ ಊಟಕ್ಕಾಗಿ
ಯಾರೋ ಅಪರಿಚಿತನಿಗೆ ದೇಹ ಅರ್ಪಿಸುವ ಹೆಣ್ಣು,

ಹಸಿವು ನೀಗಿಕೊಳ್ಳಲು, ಸಂಸಾರ ನಡೆಸಲು ಇತರರ ಮಲ ಹೊತ್ತು ಸಾಗುವ ವ್ಯಕ್ತಿ,

ರೋಗ ಉಲ್ಬಣಿಸಿದ್ದರೂ ಚಿಕಿತ್ಸೆ ಪಡೆಯಲು ಕಾಸಿಲ್ಲದೆ ಸಾವನ್ನು ಎದುರು ನೋಡುತ್ತಿರುವ ಜೀವ,

ತಾನು ಮಾಡದ ತಪ್ಪಿಗೆ ಜ್ಯೆಲುಪಾಲಾಗಿ
ಕೋರ್ಟನಿಂದ ಜಾಮೀನು ಸಿಕ್ಕರೂ ಶ್ಯೂರಿಟಿ ಇಲ್ಲದೇ
ವರ್ಷಾನುಗಟ್ಟಲೆ ಜ್ಯೆಲಿನಲ್ಲಿ ಕೊಳೆಯುತ್ತಿರುವ ನತದೃಷ್ಟ,

ಓದುವ ಆಸೆ ಇದ್ದರು ಬಡತನದಿಂದ ಸಾಧ್ಯವಾಗದೆ ಹೋಟೆಲ್ಲಿನಲ್ಲಿ
ದಿನದ 18 ಗಂಟೆ ದುಡಿಯುವ ಪುಟ್ಟ ಕಂದಮ್ಮಗಳು,

ಮದುವೆ ವಯಸ್ಸು ಮೀರಿದ್ದರೂ ಮದುವೆಯಾಗದೆ ತನ್ನ ಓರಗೆಯವರು ತಮ್ಮ ಮಕ್ಕಳೊಂದಿಗೆ ಆಟವಾಡುವುದನ್ನು ನೋಡುತ್ತಾ
ತನ್ನ ದರಿದ್ರ ದುರಾದೃಷ್ಟದ ಅಸಹಾಯಕತೆಗೆ ಕೊರಗುವ ಅಬಲೆ,

ಸೇಬು, ಐಸ್ ಕ್ರೀಮ್, ಡ್ರೈಪ್ರೂಟ್ಸ್ ಗಳನ್ನು ಜೀವನದಲ್ಲಿ ಒಮ್ಮೆಯೂ ಸವಿಯದ ಕೋಟ್ಯಾಂತರ ಜನ ವಾಸಿಸುತ್ತಿರುವ ಈ ನಮ್ಮ ಸಮಾಜದಲ್ಲಿ,

ರಾಜಕಾರಣಿಗಳು ಆಡಳಿತಗಾರರು, ಸಿನಿಮಾ ನಟರು, ಪತ್ರಿಕೋದ್ಯಮಿಗಳು,
ವ್ಯಾಪಾರಿಗಳು, ಸಾಹಿತಿಗಳು, ಮಠಾಧೀಶರು, …ಇತ್ಯಾದಿ, ಇತ್ಯಾದಿಗಳು………

ಮಹಾನ್ ನಾಗರೀಕರಂತೆ,
ಇರುವ – ಇಲ್ಲದ – ದೇವರು ಧರ್ಮ, ಜಾತಿ,
ತತ್ವ ಸಿದ್ಧಾಂತ, ವಾಕ್ ಚಾತುರ್ಯಗಳನ್ನು ಪ್ರದರ್ಶಿಸುತ್ತಾ, ತಮಗೂ ಇದಕ್ಕೂ ಸಂಬಂಧವಿಲ್ಲದಿರುವಂತೆ ಜೀವಿಸುತ್ತಿರುವುದನ್ನು,
ನೋಡಿದರೆ,

ಈ ಅಭಿವೃದ್ಧಿ ಮತ್ತು ಚಿಂತನೆಗಳ ಕ್ರಮವನ್ನೇ ಪ್ರಶ್ನಿಸಿಕೊಳ್ಳಬೇಕೆನಿಸುತ್ತದೆ.

ಕನಿಷ್ಠ ಮಟ್ಟದ ನಾಗರಿಕ ಸೌಲಭ್ಯಗಳನ್ನು ಈ ಜನರಿಗೆ ತಲುಪಿಸಲು ಸಾಧ್ಯವಾಗದ ವ್ಯವಸ್ಥೆಯ ಬಗ್ಗೆ ಜಿಗುಪ್ಸೆ ಮೂಡುತ್ತದೆ.

ಎಷ್ಟೊಂದು ಕ್ರಮಬದ್ಧ ಆಡಳಿತ ವ್ಯವಸ್ಥೆ ಇದೆ. ಗ್ರಾಮ ಪಂಚಾಯತಿಯಿಂದ ಕೇಂದ್ರ ಸರ್ಕಾರದವರೆಗೆ ಮತ್ತು ಇದನ್ನು ನಿರ್ವಹಿಸುವವರು ಶಿಶಿವಿಹಾರದಿಂದ ಡಾಕ್ಟರೇಟ್ ವರೆಗೆ ಓದಿರುತ್ತಾರೆ.

ಸಾಕಷ್ಟು ಸಂಬಳ ಮತ್ತು ಇತರ ಸೌಲಭ್ಯಗಳನ್ನು ಪಡೆಯುತ್ತಾರೆ.

ಇದನ್ನು ಬೇರೆ ಬೇರೆ ರೀತಿಯಲ್ಲಿ ನಿಯಂತ್ರಿಸಲು ಸಹಕರಿಸಲು ಮೇಲ್ವಿಚಾರಣೆ ನಡೆಸಲು ಅನೇಕ ಮತ್ತಷ್ಟು ಸರ್ಕಾರಿ ಸಂಸ್ಥೆಗಳೇ ಇವೆ.

ಆದರೂ ಸಾಕಷ್ಟು ಉತ್ತಮ ವಾತಾವರಣ ನಿರ್ಮಿಸಲು ಸಾಧ್ಯವಾಗುತ್ತಿಲ್ಲ.

ಹೌದು, ಒಂದಷ್ಟು ಜನ ಇದರ ಸಂಪೂರ್ಣ ಲಾಭ ಪಡೆದು ಸುಖವಾಗಿದ್ದಾರೆ. ಅವರುಗಳಿಗೆ ಯಾವುದೇ ತಕರಾರು ಇಲ್ಲ.

ಹಾಗೆಂದು ಜಾಗೃತಗೊಂಡ ಮನಸ್ಸುಗಳು ಸುಮ್ಮನೆ ಇರಬಾರದು. ಯಾವುದಾದರೂ ರೀತಿಯಲ್ಲಿ ಈ ವ್ಯವಸ್ಥೆಯ ನಾಗರಿಕ ಸೌಲಭ್ಯಗಳನ್ನು ವಂಚಿತರಿಗೆ ತಲುಪಿಸಲು ಪ್ರಯತ್ನಿಸಬೇಕಿದೆ.

ಇಲ್ಲದಿದ್ದರೆ ಮುಂದೆ ಈ ಅಂತರ ಹೆಚ್ಚಾದಂತೆ ಈಗ ನೆಮ್ಮದಿಯಿಂದ ಇರುವವರ ಅನುಕೂಲಗಳಿಗೂ ತೊಂದರೆಯಾಗುವ ಸಾಧ್ಯತೆ ಇದೆ.

ಕ್ರಿಯಾತ್ಮಕ ಮಾನವೀಯ ಮನಸ್ಸುಗಳು ಈ ಬಗ್ಗೆ ಮತ್ತಷ್ಟು ಚಿಂತಿಸುವುದು ವ್ಯವಸ್ಥೆಯ ಸುಧಾರಣೆಯ ದೃಷ್ಟಿಯಿಂದ ತುಂಬಾ ಅವಶ್ಯಕತೆ ಇದೆ.

ಮುಂದಿನ ದಿನಗಳು ಮತ್ತಷ್ಟು ಹದಗೆಡುವ ಮುನ್ನ ಎಚ್ಚರಿಕೆಯಿಂದ ಮುನ್ನಡೆಯಬೇಕಿದೆ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago