Categories: ಲೇಖನ

ಜಾಗೃತ ಮನಸ್ಸುಗಳ ಜವಾಬ್ದಾರಿ…….

ಚಳಿ ತಡೆಯಲಾರದೆ ರಸ್ತೆ ಬದಿಯಲ್ಲಿ ಮಲಗಿರುವ ಮಗು,

ಒಂದು ತುತ್ತು ಅನ್ನಕ್ಕಾಗಿ ದೇವ ಮಂದಿರಗಳ ಮುಂದೆ
ಹಸಿವಿನಿಂದ ಅಂಗಲಾಚುತ್ತಿರುವ ಪುಟ್ಟ ಕಂದ,

ತನ್ನ ಹಾಗೂ ತನ್ನ ನಂಬಿದವರ ಊಟಕ್ಕಾಗಿ
ಯಾರೋ ಅಪರಿಚಿತನಿಗೆ ದೇಹ ಅರ್ಪಿಸುವ ಹೆಣ್ಣು,

ಹಸಿವು ನೀಗಿಕೊಳ್ಳಲು, ಸಂಸಾರ ನಡೆಸಲು ಇತರರ ಮಲ ಹೊತ್ತು ಸಾಗುವ ವ್ಯಕ್ತಿ,

ರೋಗ ಉಲ್ಬಣಿಸಿದ್ದರೂ ಚಿಕಿತ್ಸೆ ಪಡೆಯಲು ಕಾಸಿಲ್ಲದೆ ಸಾವನ್ನು ಎದುರು ನೋಡುತ್ತಿರುವ ಜೀವ,

ತಾನು ಮಾಡದ ತಪ್ಪಿಗೆ ಜ್ಯೆಲುಪಾಲಾಗಿ
ಕೋರ್ಟನಿಂದ ಜಾಮೀನು ಸಿಕ್ಕರೂ ಶ್ಯೂರಿಟಿ ಇಲ್ಲದೇ
ವರ್ಷಾನುಗಟ್ಟಲೆ ಜ್ಯೆಲಿನಲ್ಲಿ ಕೊಳೆಯುತ್ತಿರುವ ನತದೃಷ್ಟ,

ಓದುವ ಆಸೆ ಇದ್ದರು ಬಡತನದಿಂದ ಸಾಧ್ಯವಾಗದೆ ಹೋಟೆಲ್ಲಿನಲ್ಲಿ
ದಿನದ 18 ಗಂಟೆ ದುಡಿಯುವ ಪುಟ್ಟ ಕಂದಮ್ಮಗಳು,

ಮದುವೆ ವಯಸ್ಸು ಮೀರಿದ್ದರೂ ಮದುವೆಯಾಗದೆ ತನ್ನ ಓರಗೆಯವರು ತಮ್ಮ ಮಕ್ಕಳೊಂದಿಗೆ ಆಟವಾಡುವುದನ್ನು ನೋಡುತ್ತಾ
ತನ್ನ ದರಿದ್ರ ದುರಾದೃಷ್ಟದ ಅಸಹಾಯಕತೆಗೆ ಕೊರಗುವ ಅಬಲೆ,

ಸೇಬು, ಐಸ್ ಕ್ರೀಮ್, ಡ್ರೈಪ್ರೂಟ್ಸ್ ಗಳನ್ನು ಜೀವನದಲ್ಲಿ ಒಮ್ಮೆಯೂ ಸವಿಯದ ಕೋಟ್ಯಾಂತರ ಜನ ವಾಸಿಸುತ್ತಿರುವ ಈ ನಮ್ಮ ಸಮಾಜದಲ್ಲಿ,

ರಾಜಕಾರಣಿಗಳು ಆಡಳಿತಗಾರರು, ಸಿನಿಮಾ ನಟರು, ಪತ್ರಿಕೋದ್ಯಮಿಗಳು,
ವ್ಯಾಪಾರಿಗಳು, ಸಾಹಿತಿಗಳು, ಮಠಾಧೀಶರು, …ಇತ್ಯಾದಿ, ಇತ್ಯಾದಿಗಳು………

ಮಹಾನ್ ನಾಗರೀಕರಂತೆ,
ಇರುವ – ಇಲ್ಲದ – ದೇವರು ಧರ್ಮ, ಜಾತಿ,
ತತ್ವ ಸಿದ್ಧಾಂತ, ವಾಕ್ ಚಾತುರ್ಯಗಳನ್ನು ಪ್ರದರ್ಶಿಸುತ್ತಾ, ತಮಗೂ ಇದಕ್ಕೂ ಸಂಬಂಧವಿಲ್ಲದಿರುವಂತೆ ಜೀವಿಸುತ್ತಿರುವುದನ್ನು,
ನೋಡಿದರೆ,

ಈ ಅಭಿವೃದ್ಧಿ ಮತ್ತು ಚಿಂತನೆಗಳ ಕ್ರಮವನ್ನೇ ಪ್ರಶ್ನಿಸಿಕೊಳ್ಳಬೇಕೆನಿಸುತ್ತದೆ.

ಕನಿಷ್ಠ ಮಟ್ಟದ ನಾಗರಿಕ ಸೌಲಭ್ಯಗಳನ್ನು ಈ ಜನರಿಗೆ ತಲುಪಿಸಲು ಸಾಧ್ಯವಾಗದ ವ್ಯವಸ್ಥೆಯ ಬಗ್ಗೆ ಜಿಗುಪ್ಸೆ ಮೂಡುತ್ತದೆ.

ಎಷ್ಟೊಂದು ಕ್ರಮಬದ್ಧ ಆಡಳಿತ ವ್ಯವಸ್ಥೆ ಇದೆ. ಗ್ರಾಮ ಪಂಚಾಯತಿಯಿಂದ ಕೇಂದ್ರ ಸರ್ಕಾರದವರೆಗೆ ಮತ್ತು ಇದನ್ನು ನಿರ್ವಹಿಸುವವರು ಶಿಶಿವಿಹಾರದಿಂದ ಡಾಕ್ಟರೇಟ್ ವರೆಗೆ ಓದಿರುತ್ತಾರೆ.

ಸಾಕಷ್ಟು ಸಂಬಳ ಮತ್ತು ಇತರ ಸೌಲಭ್ಯಗಳನ್ನು ಪಡೆಯುತ್ತಾರೆ.

ಇದನ್ನು ಬೇರೆ ಬೇರೆ ರೀತಿಯಲ್ಲಿ ನಿಯಂತ್ರಿಸಲು ಸಹಕರಿಸಲು ಮೇಲ್ವಿಚಾರಣೆ ನಡೆಸಲು ಅನೇಕ ಮತ್ತಷ್ಟು ಸರ್ಕಾರಿ ಸಂಸ್ಥೆಗಳೇ ಇವೆ.

ಆದರೂ ಸಾಕಷ್ಟು ಉತ್ತಮ ವಾತಾವರಣ ನಿರ್ಮಿಸಲು ಸಾಧ್ಯವಾಗುತ್ತಿಲ್ಲ.

ಹೌದು, ಒಂದಷ್ಟು ಜನ ಇದರ ಸಂಪೂರ್ಣ ಲಾಭ ಪಡೆದು ಸುಖವಾಗಿದ್ದಾರೆ. ಅವರುಗಳಿಗೆ ಯಾವುದೇ ತಕರಾರು ಇಲ್ಲ.

ಹಾಗೆಂದು ಜಾಗೃತಗೊಂಡ ಮನಸ್ಸುಗಳು ಸುಮ್ಮನೆ ಇರಬಾರದು. ಯಾವುದಾದರೂ ರೀತಿಯಲ್ಲಿ ಈ ವ್ಯವಸ್ಥೆಯ ನಾಗರಿಕ ಸೌಲಭ್ಯಗಳನ್ನು ವಂಚಿತರಿಗೆ ತಲುಪಿಸಲು ಪ್ರಯತ್ನಿಸಬೇಕಿದೆ.

ಇಲ್ಲದಿದ್ದರೆ ಮುಂದೆ ಈ ಅಂತರ ಹೆಚ್ಚಾದಂತೆ ಈಗ ನೆಮ್ಮದಿಯಿಂದ ಇರುವವರ ಅನುಕೂಲಗಳಿಗೂ ತೊಂದರೆಯಾಗುವ ಸಾಧ್ಯತೆ ಇದೆ.

ಕ್ರಿಯಾತ್ಮಕ ಮಾನವೀಯ ಮನಸ್ಸುಗಳು ಈ ಬಗ್ಗೆ ಮತ್ತಷ್ಟು ಚಿಂತಿಸುವುದು ವ್ಯವಸ್ಥೆಯ ಸುಧಾರಣೆಯ ದೃಷ್ಟಿಯಿಂದ ತುಂಬಾ ಅವಶ್ಯಕತೆ ಇದೆ.

ಮುಂದಿನ ದಿನಗಳು ಮತ್ತಷ್ಟು ಹದಗೆಡುವ ಮುನ್ನ ಎಚ್ಚರಿಕೆಯಿಂದ ಮುನ್ನಡೆಯಬೇಕಿದೆ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

27 minutes ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

55 minutes ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

4 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

7 hours ago

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…

19 hours ago

ಬೈಕ್ ಗೆ ಕಾರು ಡಿಕ್ಕಿ: ಹಲವರಿಗೆ ಗಂಭೀರ ಗಾಯ

ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ‌‌ ನಡೆದಿದೆ..…

21 hours ago