ದೊಡ್ಡಬಳ್ಳಾಪುರ: ರಾಜ್ಯದ ಎಲ್ಲ ಸಮುದಾಯಗಳ ಸ್ಥಿತಿಗತಿಯನ್ನು ತಿಳಿಯುವ ಸಲುವಾಗಿ ರಾಜ್ಯ ಸರ್ಕಾರವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿದ್ದು, ಸಮೀಕ್ಷೆಗೆ ಬರುವ ಗಣತಿದಾರರಿಗೆ ಜನತೆ ಸೂಕ್ತ ಮಾಹಿತಿ ಕೊಡುವ ಮೂಲಕ ಸಹಕರಿಸಬೇಕು ಎಂದು ಮಾಜಿ ಶಾಸಕ ಟಿ ವೆಂಕಟರಮಣಯ್ಯ ಮನವಿ ಮಾಡಿದರು.
ನಗರದ ಒಕ್ಕಲಿಗರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಹಿಂದೆ 2013-14ರಲ್ಲಿ ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳ ಸಮೀಕ್ಷೆ ನಡೆಸಿತ್ತು. ಆದರೆ, ಹಲವು ಸಮುದಾಯದ ಮುಖಂಡರು, ಪ್ರಮುಖರು ಸಮೀಕ್ಷೆಯನ್ನು ಮತ್ತೊಮ್ಮೆ ಸೂಕ್ತ ರೀತಿಯಲ್ಲಿ ಮಾಡಬೇಕು ಎಂದು ಮನವಿ ಮಾಡಿದ ಹಿನ್ನೆಲೆ ರಾಜ್ಯ ಸರ್ಕಾರ ಮತ್ತೆ ಸಮೀಕ್ಷೆಗೆ ಮುಂದಾಗಿದೆ. ಸಮೀಕ್ಷೆಗೆ ಸಹಕಾರಿಯಾಗುವ ಅರ್ಜಿಗಳನ್ನು ಆಶಾ ಕಾರ್ಯಕರ್ತೆಯರು ಪ್ರತಿ ಮನೆ ತಲುಪಿಸಲಿದ್ದಾರೆ. ಇದೇ ತಿಂಗಳ 22ರಿಂದ ಸಮೀಕ್ಷೆ ಆರಂಭವಾಗಲಿದ್ದು, ಮಾಹಿತಿ ಪಡೆಯಲು ಮನೆ ಬಾಗಿಲಿಗೆ ಶಿಕ್ಷಕರು ಬರಲಿದ್ದಾರೆ. ಈ ಸಂದರ್ಭದಲ್ಲಿ ಮನೆಯ ಮುಖ್ಯಸ್ಥರು ಹಾಜರಿದ್ದು ಸೂಕ್ತ ಮಾಹಿತಿಯನ್ನು ಶಿಕ್ಷಕರಿಗೆ ಕೊಡುವ ಮೂಲಕ ಜಾತಿ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸೆ.15ರಂದು ನಿರ್ಮಲಾನಂದ ಸ್ವಾಮೀಜಿ ಸಭೆ
ನಂತರ ಒಕ್ಕಲಿಗ ಮುಖಂಡರಾದ ನಾಗೇಶ್ ಮಾತನಾಡಿ, ರಾಜ್ಯ ಸರ್ಕಾರ ನಡೆಸಲಿರುವ ಸಮೀಕ್ಷೆಯಲ್ಲಿ ಸಮುದಾಯದ ಜನತೆ ಭಾಗವಹಿಸುವಿಕೆ ಹಾಗೂ ಮಾಹಿತಿ ನೀಡುವ ಕುರಿತು ಅರಿವು ಮೂಡಿಸುವ ಸಲುವಾಗಿ ಸೋಮವಾರ (ಸೆ. 15)ದಂದು ಆದಿಚುಂಚನಗಿರಿ ಮಹಾಸ್ವಾಮಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಒಕ್ಕಲಿಗರ ಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ತಾಲೂಕಿನ ಒಕ್ಕಲಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿದ್ದು, ಕುಟುಂಬದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕೇಳಲಾಗುತ್ತದೆ. ಒಕ್ಕಲಿಗ ಸಮುದಾಯದ ಹೆಸರನ್ನು ಸರಿಯಾಗಿ ನಮೂದಿಸಬೇಕು. ಸಮುದಾಯ ಬಂಧುಗಳು ಸೂಕ್ತ ರೀತಿಯಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ತಾಲೂಕಿನಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಭೆಯಲ್ಲಿದ್ದ ಬೈರೇಗೌಡ, ಶಶಿಧರ್ ಮೊದಲಾದ ಮುಖಂಡರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೆ.ಪಿ.ದಯಾನಂದ್, ವೆಂಕಟೇಶ್ ಬಾಬು, ಕೆ.ಪಿ.ಜಗನ್ನಾಥ್, ಬಿ.ಜಿ.ಹೇಮಂತರಾಜು, ವೆಂಕಟೇಶ್ (ಅಪ್ಪಿ), ವಿಶ್ವಾಸ್ ಹನುಮಂತೇಗೌಡ, ನಾಗೇಶ್, ರೇವತಿ ಅನಂತರಾಮು, ಡಿ.ಸಿ.ಶಶಿಧರ್, ಶರತ್ ಪಟೇಲ್, ಶಾಂತಮ್ಮ ಮೊದಲಾದವರು ಹಾಜರಿದ್ದರು.
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…