ಜಾತಿಗಣತಿಗೆ ಸಹಕರಿಸುವಂತೆ ಮನವಿ : ಸೆ.15ರಂದು ನಿರ್ಮಲಾನಂದ ಸ್ವಾಮೀಜಿ ಸಭೆ

ದೊಡ್ಡಬಳ್ಳಾಪುರ: ರಾಜ್ಯದ ಎಲ್ಲ ಸಮುದಾಯಗಳ ಸ್ಥಿತಿಗತಿಯನ್ನು ತಿಳಿಯುವ ಸಲುವಾಗಿ ರಾಜ್ಯ ಸರ್ಕಾರವು  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿದ್ದು,  ಸಮೀಕ್ಷೆಗೆ ಬರುವ ಗಣತಿದಾರರಿಗೆ ಜನತೆ ಸೂಕ್ತ ಮಾಹಿತಿ ಕೊಡುವ ಮೂಲಕ ಸಹಕರಿಸಬೇಕು ಎಂದು ಮಾಜಿ ಶಾಸಕ ಟಿ ವೆಂಕಟರಮಣಯ್ಯ ಮನವಿ ಮಾಡಿದರು.

ನಗರದ ಒಕ್ಕಲಿಗರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಹಿಂದೆ 2013-14ರಲ್ಲಿ ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳ ಸಮೀಕ್ಷೆ ನಡೆಸಿತ್ತು. ಆದರೆ, ಹಲವು ಸಮುದಾಯದ ಮುಖಂಡರು, ಪ್ರಮುಖರು ಸಮೀಕ್ಷೆಯನ್ನು ಮತ್ತೊಮ್ಮೆ ಸೂಕ್ತ ರೀತಿಯಲ್ಲಿ ಮಾಡಬೇಕು ಎಂದು ಮನವಿ ಮಾಡಿದ ಹಿನ್ನೆಲೆ ರಾಜ್ಯ ಸರ್ಕಾರ ಮತ್ತೆ ಸಮೀಕ್ಷೆಗೆ ಮುಂದಾಗಿದೆ. ಸಮೀಕ್ಷೆಗೆ ಸಹಕಾರಿಯಾಗುವ ಅರ್ಜಿಗಳನ್ನು ಆಶಾ ಕಾರ್ಯಕರ್ತೆಯರು ಪ್ರತಿ ಮನೆ ತಲುಪಿಸಲಿದ್ದಾರೆ. ಇದೇ ತಿಂಗಳ 22ರಿಂದ ಸಮೀಕ್ಷೆ ಆರಂಭವಾಗಲಿದ್ದು, ಮಾಹಿತಿ ಪಡೆಯಲು ಮನೆ ಬಾಗಿಲಿಗೆ ಶಿಕ್ಷಕರು ಬರಲಿದ್ದಾರೆ. ಈ ಸಂದರ್ಭದಲ್ಲಿ ಮನೆಯ ಮುಖ್ಯಸ್ಥರು ಹಾಜರಿದ್ದು ಸೂಕ್ತ ಮಾಹಿತಿಯನ್ನು ಶಿಕ್ಷಕರಿಗೆ ಕೊಡುವ ಮೂಲಕ ಜಾತಿ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸೆ.15ರಂದು ನಿರ್ಮಲಾನಂದ ಸ್ವಾಮೀಜಿ ಸಭೆ

ನಂತರ ಒಕ್ಕಲಿಗ ಮುಖಂಡರಾದ  ನಾಗೇಶ್ ಮಾತನಾಡಿ, ರಾಜ್ಯ ಸರ್ಕಾರ ನಡೆಸಲಿರುವ ಸಮೀಕ್ಷೆಯಲ್ಲಿ  ಸಮುದಾಯದ ಜನತೆ ಭಾಗವಹಿಸುವಿಕೆ ಹಾಗೂ  ಮಾಹಿತಿ ನೀಡುವ ಕುರಿತು ಅರಿವು ಮೂಡಿಸುವ ಸಲುವಾಗಿ ಸೋಮವಾರ (ಸೆ. 15)ದಂದು ಆದಿಚುಂಚನಗಿರಿ ಮಹಾಸ್ವಾಮಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಒಕ್ಕಲಿಗರ ಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ತಾಲೂಕಿನ  ಒಕ್ಕಲಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿದ್ದು, ಕುಟುಂಬದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕೇಳಲಾಗುತ್ತದೆ. ಒಕ್ಕಲಿಗ ಸಮುದಾಯದ ಹೆಸರನ್ನು ಸರಿಯಾಗಿ ನಮೂದಿಸಬೇಕು. ಸಮುದಾಯ ಬಂಧುಗಳು ಸೂಕ್ತ ರೀತಿಯಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸುವಂತೆ  ತಾಲೂಕಿನಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಭೆಯಲ್ಲಿದ್ದ ಬೈರೇಗೌಡ, ಶಶಿಧರ್ ಮೊದಲಾದ ಮುಖಂಡರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೆ.ಪಿ.ದಯಾನಂದ್, ವೆಂಕಟೇಶ್ ಬಾಬು, ಕೆ.ಪಿ.ಜಗನ್ನಾಥ್, ಬಿ.ಜಿ.ಹೇಮಂತರಾಜು, ವೆಂಕಟೇಶ್ (ಅಪ್ಪಿ), ವಿಶ್ವಾಸ್ ಹನುಮಂತೇಗೌಡ, ನಾಗೇಶ್, ರೇವತಿ ಅನಂತರಾಮು, ಡಿ.ಸಿ.ಶಶಿಧರ್, ಶರತ್ ಪಟೇಲ್, ಶಾಂತಮ್ಮ  ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

10 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

10 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

15 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago