ದೊಡ್ಡಬಳ್ಳಾಪುರ: ರಾಜ್ಯದ ಎಲ್ಲ ಸಮುದಾಯಗಳ ಸ್ಥಿತಿಗತಿಯನ್ನು ತಿಳಿಯುವ ಸಲುವಾಗಿ ರಾಜ್ಯ ಸರ್ಕಾರವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿದ್ದು, ಸಮೀಕ್ಷೆಗೆ ಬರುವ ಗಣತಿದಾರರಿಗೆ ಜನತೆ ಸೂಕ್ತ ಮಾಹಿತಿ ಕೊಡುವ ಮೂಲಕ ಸಹಕರಿಸಬೇಕು ಎಂದು ಮಾಜಿ ಶಾಸಕ ಟಿ ವೆಂಕಟರಮಣಯ್ಯ ಮನವಿ ಮಾಡಿದರು.
ನಗರದ ಒಕ್ಕಲಿಗರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಹಿಂದೆ 2013-14ರಲ್ಲಿ ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳ ಸಮೀಕ್ಷೆ ನಡೆಸಿತ್ತು. ಆದರೆ, ಹಲವು ಸಮುದಾಯದ ಮುಖಂಡರು, ಪ್ರಮುಖರು ಸಮೀಕ್ಷೆಯನ್ನು ಮತ್ತೊಮ್ಮೆ ಸೂಕ್ತ ರೀತಿಯಲ್ಲಿ ಮಾಡಬೇಕು ಎಂದು ಮನವಿ ಮಾಡಿದ ಹಿನ್ನೆಲೆ ರಾಜ್ಯ ಸರ್ಕಾರ ಮತ್ತೆ ಸಮೀಕ್ಷೆಗೆ ಮುಂದಾಗಿದೆ. ಸಮೀಕ್ಷೆಗೆ ಸಹಕಾರಿಯಾಗುವ ಅರ್ಜಿಗಳನ್ನು ಆಶಾ ಕಾರ್ಯಕರ್ತೆಯರು ಪ್ರತಿ ಮನೆ ತಲುಪಿಸಲಿದ್ದಾರೆ. ಇದೇ ತಿಂಗಳ 22ರಿಂದ ಸಮೀಕ್ಷೆ ಆರಂಭವಾಗಲಿದ್ದು, ಮಾಹಿತಿ ಪಡೆಯಲು ಮನೆ ಬಾಗಿಲಿಗೆ ಶಿಕ್ಷಕರು ಬರಲಿದ್ದಾರೆ. ಈ ಸಂದರ್ಭದಲ್ಲಿ ಮನೆಯ ಮುಖ್ಯಸ್ಥರು ಹಾಜರಿದ್ದು ಸೂಕ್ತ ಮಾಹಿತಿಯನ್ನು ಶಿಕ್ಷಕರಿಗೆ ಕೊಡುವ ಮೂಲಕ ಜಾತಿ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸೆ.15ರಂದು ನಿರ್ಮಲಾನಂದ ಸ್ವಾಮೀಜಿ ಸಭೆ
ನಂತರ ಒಕ್ಕಲಿಗ ಮುಖಂಡರಾದ ನಾಗೇಶ್ ಮಾತನಾಡಿ, ರಾಜ್ಯ ಸರ್ಕಾರ ನಡೆಸಲಿರುವ ಸಮೀಕ್ಷೆಯಲ್ಲಿ ಸಮುದಾಯದ ಜನತೆ ಭಾಗವಹಿಸುವಿಕೆ ಹಾಗೂ ಮಾಹಿತಿ ನೀಡುವ ಕುರಿತು ಅರಿವು ಮೂಡಿಸುವ ಸಲುವಾಗಿ ಸೋಮವಾರ (ಸೆ. 15)ದಂದು ಆದಿಚುಂಚನಗಿರಿ ಮಹಾಸ್ವಾಮಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಒಕ್ಕಲಿಗರ ಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ತಾಲೂಕಿನ ಒಕ್ಕಲಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿದ್ದು, ಕುಟುಂಬದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕೇಳಲಾಗುತ್ತದೆ. ಒಕ್ಕಲಿಗ ಸಮುದಾಯದ ಹೆಸರನ್ನು ಸರಿಯಾಗಿ ನಮೂದಿಸಬೇಕು. ಸಮುದಾಯ ಬಂಧುಗಳು ಸೂಕ್ತ ರೀತಿಯಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ತಾಲೂಕಿನಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಭೆಯಲ್ಲಿದ್ದ ಬೈರೇಗೌಡ, ಶಶಿಧರ್ ಮೊದಲಾದ ಮುಖಂಡರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೆ.ಪಿ.ದಯಾನಂದ್, ವೆಂಕಟೇಶ್ ಬಾಬು, ಕೆ.ಪಿ.ಜಗನ್ನಾಥ್, ಬಿ.ಜಿ.ಹೇಮಂತರಾಜು, ವೆಂಕಟೇಶ್ (ಅಪ್ಪಿ), ವಿಶ್ವಾಸ್ ಹನುಮಂತೇಗೌಡ, ನಾಗೇಶ್, ರೇವತಿ ಅನಂತರಾಮು, ಡಿ.ಸಿ.ಶಶಿಧರ್, ಶರತ್ ಪಟೇಲ್, ಶಾಂತಮ್ಮ ಮೊದಲಾದವರು ಹಾಜರಿದ್ದರು.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…