ಜಾತಿಗಣತಿಗೆ ಸಹಕರಿಸುವಂತೆ ಮನವಿ : ಸೆ.15ರಂದು ನಿರ್ಮಲಾನಂದ ಸ್ವಾಮೀಜಿ ಸಭೆ

ದೊಡ್ಡಬಳ್ಳಾಪುರ: ರಾಜ್ಯದ ಎಲ್ಲ ಸಮುದಾಯಗಳ ಸ್ಥಿತಿಗತಿಯನ್ನು ತಿಳಿಯುವ ಸಲುವಾಗಿ ರಾಜ್ಯ ಸರ್ಕಾರವು  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿದ್ದು,  ಸಮೀಕ್ಷೆಗೆ ಬರುವ ಗಣತಿದಾರರಿಗೆ ಜನತೆ ಸೂಕ್ತ ಮಾಹಿತಿ ಕೊಡುವ ಮೂಲಕ ಸಹಕರಿಸಬೇಕು ಎಂದು ಮಾಜಿ ಶಾಸಕ ಟಿ ವೆಂಕಟರಮಣಯ್ಯ ಮನವಿ ಮಾಡಿದರು.

ನಗರದ ಒಕ್ಕಲಿಗರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಹಿಂದೆ 2013-14ರಲ್ಲಿ ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳ ಸಮೀಕ್ಷೆ ನಡೆಸಿತ್ತು. ಆದರೆ, ಹಲವು ಸಮುದಾಯದ ಮುಖಂಡರು, ಪ್ರಮುಖರು ಸಮೀಕ್ಷೆಯನ್ನು ಮತ್ತೊಮ್ಮೆ ಸೂಕ್ತ ರೀತಿಯಲ್ಲಿ ಮಾಡಬೇಕು ಎಂದು ಮನವಿ ಮಾಡಿದ ಹಿನ್ನೆಲೆ ರಾಜ್ಯ ಸರ್ಕಾರ ಮತ್ತೆ ಸಮೀಕ್ಷೆಗೆ ಮುಂದಾಗಿದೆ. ಸಮೀಕ್ಷೆಗೆ ಸಹಕಾರಿಯಾಗುವ ಅರ್ಜಿಗಳನ್ನು ಆಶಾ ಕಾರ್ಯಕರ್ತೆಯರು ಪ್ರತಿ ಮನೆ ತಲುಪಿಸಲಿದ್ದಾರೆ. ಇದೇ ತಿಂಗಳ 22ರಿಂದ ಸಮೀಕ್ಷೆ ಆರಂಭವಾಗಲಿದ್ದು, ಮಾಹಿತಿ ಪಡೆಯಲು ಮನೆ ಬಾಗಿಲಿಗೆ ಶಿಕ್ಷಕರು ಬರಲಿದ್ದಾರೆ. ಈ ಸಂದರ್ಭದಲ್ಲಿ ಮನೆಯ ಮುಖ್ಯಸ್ಥರು ಹಾಜರಿದ್ದು ಸೂಕ್ತ ಮಾಹಿತಿಯನ್ನು ಶಿಕ್ಷಕರಿಗೆ ಕೊಡುವ ಮೂಲಕ ಜಾತಿ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸೆ.15ರಂದು ನಿರ್ಮಲಾನಂದ ಸ್ವಾಮೀಜಿ ಸಭೆ

ನಂತರ ಒಕ್ಕಲಿಗ ಮುಖಂಡರಾದ  ನಾಗೇಶ್ ಮಾತನಾಡಿ, ರಾಜ್ಯ ಸರ್ಕಾರ ನಡೆಸಲಿರುವ ಸಮೀಕ್ಷೆಯಲ್ಲಿ  ಸಮುದಾಯದ ಜನತೆ ಭಾಗವಹಿಸುವಿಕೆ ಹಾಗೂ  ಮಾಹಿತಿ ನೀಡುವ ಕುರಿತು ಅರಿವು ಮೂಡಿಸುವ ಸಲುವಾಗಿ ಸೋಮವಾರ (ಸೆ. 15)ದಂದು ಆದಿಚುಂಚನಗಿರಿ ಮಹಾಸ್ವಾಮಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಒಕ್ಕಲಿಗರ ಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ತಾಲೂಕಿನ  ಒಕ್ಕಲಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿದ್ದು, ಕುಟುಂಬದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕೇಳಲಾಗುತ್ತದೆ. ಒಕ್ಕಲಿಗ ಸಮುದಾಯದ ಹೆಸರನ್ನು ಸರಿಯಾಗಿ ನಮೂದಿಸಬೇಕು. ಸಮುದಾಯ ಬಂಧುಗಳು ಸೂಕ್ತ ರೀತಿಯಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸುವಂತೆ  ತಾಲೂಕಿನಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಭೆಯಲ್ಲಿದ್ದ ಬೈರೇಗೌಡ, ಶಶಿಧರ್ ಮೊದಲಾದ ಮುಖಂಡರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೆ.ಪಿ.ದಯಾನಂದ್, ವೆಂಕಟೇಶ್ ಬಾಬು, ಕೆ.ಪಿ.ಜಗನ್ನಾಥ್, ಬಿ.ಜಿ.ಹೇಮಂತರಾಜು, ವೆಂಕಟೇಶ್ (ಅಪ್ಪಿ), ವಿಶ್ವಾಸ್ ಹನುಮಂತೇಗೌಡ, ನಾಗೇಶ್, ರೇವತಿ ಅನಂತರಾಮು, ಡಿ.ಸಿ.ಶಶಿಧರ್, ಶರತ್ ಪಟೇಲ್, ಶಾಂತಮ್ಮ  ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

4 hours ago

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…

4 hours ago

ನೀಟ್ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ- ಟಿ. ವೆಂಕಟರಮಣಯ್ಯ ಆರೋಪ

ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…

7 hours ago

ಅತಿ ಶೀಘ್ರದಲ್ಲಿ ಸಿಎಂ ಡಿಕೆಶಿ ಘಾಟಿಗೆ ಭೇಟಿ- ಆರ್.ವಿ ಮಹೇಶ್ ಕುಮಾರ್

ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…

7 hours ago

ಕೆಂಪೇಗೌಡರ ಪುತ್ಥಳಿ ಭೂಮಿಪೂಜೆ ಗೊಂದಲ ವಿಚಾರ: ಕಾನೂನುಬದ್ಧವಾಗಿಯೇ ಕಾರ್ಯ ನಡೆದಿದ್ದು, ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣ – ಬಾಶೆಟ್ಟಿಹಳ್ಳಿ ಪಪಂ ಅಧ್ಯಕ್ಷ ಪ್ರೇಮ್ ಕುಮಾರ್ ಸ್ಪಷ್ಟನೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬ್ಯಾಂಕ್ ಸರ್ಕಲ್‌ನಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪನೆಗೆ ನಡೆದ ಭೂಮಿಪೂಜೆ ಕುರಿತು ಉಂಟಾಗಿದ್ದ…

8 hours ago

ಬ್ಯಾಟರಿ ಸ್ಪಾರ್ಕ್: ಧಗಧಗ ಹೊತ್ತಿ ಉರಿದ ಟಾಟಾ ಸುಮೋ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ದೊಡ್ಡಬಳ್ಳಾಪುರ: ಬ್ಯಾಟರಿಯಲ್ಲಿ ಸ್ಪಾರ್ಕ್ ಕಾಣಿಸಿಕೊಂಡ ಪರಿಣಾಮ ಟಾಟಾ ಸುಮೋ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಬೆಂಗಳೂರು ಗ್ರಾಮಾಂತರ…

10 hours ago