ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಲಿ- ಸಿಎಂ ಸಿದ್ದರಾಮಯ್ಯ

ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಪಡಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ ಎಂದು ತಿಳಿಸಿದ್ದಾರೆ.

ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ ಎಂದು ಹೇಳಿದರು.

ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು ತಿಳಿಸಿದರು.

ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳದೆ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ ಎಂದರು.

ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಭಾರತೀಯ ಜನತಾ ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ.

ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಎನ್ನುವುದು ವಾಸ್ತವ. ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ಜಾತಿ ಎನ್ನುವ ವಾಸ್ತವವನ್ನು ಒಪ್ಪಿಕೊಳ್ಳುವ ಮೂಲಕವೇ ಅದರ ನಾಶಕ್ಕೆ ಪ್ರಯತ್ನಿಸಬೇಕಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಮೂಲಕವೇ ಜಾತಿನಾಶ ಸಾಧ್ಯ ಎಂದು ನಾನುಬಲವಾಗಿ ನಂಬಿದವನು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ನಾವು ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಇದನ್ನು ಬಿಜೆಪಿಯ ರಾಜ್ಯ ಘಟಕ ನಾನಾ ಸಬೂಬುಗಳನ್ನು ಮುಂದೊಡ್ಡಿ ವಿರೋಧಿಸುತ್ತಿದೆ. ಈ ಸಮೀಕ್ಷೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿಯನ್ನು ಪರಿಷ್ಕರಿಸಿ ಈಗಿನ ಶೇಕಡಾ 50ರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಈ ಎಲ್ಲ ಪ್ರಯತ್ನಗಳಿಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿಯ ರಾಜ್ಯಘಟಕದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಹಿಂಡಿ ಬುದ್ದಿ ಹೇಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಹೇಳಿದ್ದಾರೆ.

ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಕೊನೆಗೆ ಅದನ್ನು ತಮ್ಮ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡ ರೀತಿಯಲ್ಲಿಯೇ ಇದೀಗ ನಮ್ಮ ಜಾತಿಗಣತಿ ಕಾರ್ಯಕ್ರಮವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೆತ್ತಿಕೊಂಡಿರುವುದು ಕಾಂಗ್ರೆಸ್ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳು ಜನಪರವಾಗಿರುವುದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

3 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

13 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

17 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

1 day ago