ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ನನ್ನ ವಿರೋಧವಿದೆ. ಸ್ವಾತಂತ್ರ್ಯ ಬಂದು 76 ವರ್ಷಗಳಾಗಿದೆ, ಈ ವೇಳೆ ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು. ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ – ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ರೋಗ ಪತ್ತೆಹಚ್ಚಿದ ಮೇಲಲ್ಲವೇ ಔಷಧಿ ನೀಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನ್ಯಾಯವಾದಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಲ್ಲಿಸಲು ಹೋದರೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅದನ್ನು ಸ್ವೀಕರಿಸಲಿಲ್ಲ. ಈಗ ಬೇರೆ ಅಧ್ಯಕ್ಷರಿದ್ದು, ಅವರಿಗೆ ಕಾಂತರಾಜು ವರದಿ ಇದ್ದಂತೆಯೇ ಮಾಡಿಕೊಡುವಂತೆ ಹೇಳಿದ್ದೇನೆ. ಅವರು ನವೆಂಬರ್ನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದಿದ್ದಾರೆ.
ಅತಿ ಹಿಂದುಳಿದವರಿಗೆ ಪ್ರತ್ಯೇಕ ಗುಂಪು ಬೇಕು ಎಂಬ ಬೇಡಿಕೆ ಕುರಿತು ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆ ವರದಿ ಬಂದ ನಂತರ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…