ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ನನ್ನ ವಿರೋಧವಿದೆ. ಸ್ವಾತಂತ್ರ್ಯ ಬಂದು 76 ವರ್ಷಗಳಾಗಿದೆ, ಈ ವೇಳೆ ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು. ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ – ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ರೋಗ ಪತ್ತೆಹಚ್ಚಿದ ಮೇಲಲ್ಲವೇ ಔಷಧಿ ನೀಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನ್ಯಾಯವಾದಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಲ್ಲಿಸಲು ಹೋದರೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅದನ್ನು ಸ್ವೀಕರಿಸಲಿಲ್ಲ. ಈಗ ಬೇರೆ ಅಧ್ಯಕ್ಷರಿದ್ದು, ಅವರಿಗೆ ಕಾಂತರಾಜು ವರದಿ ಇದ್ದಂತೆಯೇ ಮಾಡಿಕೊಡುವಂತೆ ಹೇಳಿದ್ದೇನೆ. ಅವರು ನವೆಂಬರ್ನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದಿದ್ದಾರೆ.
ಅತಿ ಹಿಂದುಳಿದವರಿಗೆ ಪ್ರತ್ಯೇಕ ಗುಂಪು ಬೇಕು ಎಂಬ ಬೇಡಿಕೆ ಕುರಿತು ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆ ವರದಿ ಬಂದ ನಂತರ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…