ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ನನ್ನ ವಿರೋಧವಿದೆ. ಸ್ವಾತಂತ್ರ್ಯ ಬಂದು 76 ವರ್ಷಗಳಾಗಿದೆ, ಈ ವೇಳೆ ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು. ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ – ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ರೋಗ ಪತ್ತೆಹಚ್ಚಿದ ಮೇಲಲ್ಲವೇ ಔಷಧಿ ನೀಡುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನ್ಯಾಯವಾದಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಲ್ಲಿಸಲು ಹೋದರೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅದನ್ನು ಸ್ವೀಕರಿಸಲಿಲ್ಲ. ಈಗ ಬೇರೆ ಅಧ್ಯಕ್ಷರಿದ್ದು, ಅವರಿಗೆ ಕಾಂತರಾಜು ವರದಿ ಇದ್ದಂತೆಯೇ ಮಾಡಿಕೊಡುವಂತೆ ಹೇಳಿದ್ದೇನೆ. ಅವರು ನವೆಂಬರ್ನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದಿದ್ದಾರೆ.
ಅತಿ ಹಿಂದುಳಿದವರಿಗೆ ಪ್ರತ್ಯೇಕ ಗುಂಪು ಬೇಕು ಎಂಬ ಬೇಡಿಕೆ ಕುರಿತು ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆ ವರದಿ ಬಂದ ನಂತರ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…