ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಮಾಡುವುದೇ ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ- ಸಿಎಂ ಸಿದ್ದರಾಮಯ್ಯ

ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ. ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ. ಇಂಥಾ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಆ ಋಣವನ್ನು ತೀರಿಸುವ ಮೂಲಕ ಬಸವಾದಿ ಶರಣರ ಆಶಯದ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶರಣರು ನುಡಿದಂತೆ ನಡೆದವರು. ನಾವೂ ಆ ಮಾರ್ಗದಲ್ಲಿ ನಡೆಯಬೇಕು ಎಂದು‌ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ, ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಅಖಿಲ‌ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬೇಡಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ವಚನ ಸಂಸ್ಕೃತಿ ಅಂದರೆ ಮಾನವೀಯ ಸಂಸ್ಕೃತಿ. ಮಾನವೀಯ ಬದಲಾವಣೆಯನ್ನು ಸಮಾಜದಲ್ಲಿ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಕಾರಣಕ್ಕೆ ಬಡತನ ಮತ್ತು ತಾರತಮ್ಯ ಹೆಚ್ಚಾಯಿತು. ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಮೇಲು ಕೀಳಿನ, ಜಾತಿ ತಾರತಮ್ಯದ ವ್ಯವಸ್ಥೆಯನ್ನು ಅಳಿಸಿ ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮ ಎಂದು ಸಾರಿದರು. ನಾವು ವಿಶ್ವ ಮಾನವರಾಗದಿದ್ದರೂ ಬೇಡ, ಅಲ್ಪ ಮಾನವರಾಗಬಾರದು ಎಂದರು

ದ್ವೇಷ, ವೈರತ್ವ, ಸೇಡು ಮನುಷ್ಯನ ಗುಣ ಅಲ್ಲ.‌ ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ಜಾತಿ-ಧರ್ಮದ ಕಾರಣಕ್ಕೆ ದ್ವೇಷಿಸುತ್ತೀವಿ. ಇದು ಅತ್ಯಂತ ಅನಾಗರಿಕ ಎಂದು ತಿಳಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

6 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

9 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

17 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

22 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago