ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಮಾಡುವುದೇ ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ- ಸಿಎಂ ಸಿದ್ದರಾಮಯ್ಯ

ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ. ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ. ಇಂಥಾ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಆ ಋಣವನ್ನು ತೀರಿಸುವ ಮೂಲಕ ಬಸವಾದಿ ಶರಣರ ಆಶಯದ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶರಣರು ನುಡಿದಂತೆ ನಡೆದವರು. ನಾವೂ ಆ ಮಾರ್ಗದಲ್ಲಿ ನಡೆಯಬೇಕು ಎಂದು‌ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ, ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಅಖಿಲ‌ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬೇಡಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ವಚನ ಸಂಸ್ಕೃತಿ ಅಂದರೆ ಮಾನವೀಯ ಸಂಸ್ಕೃತಿ. ಮಾನವೀಯ ಬದಲಾವಣೆಯನ್ನು ಸಮಾಜದಲ್ಲಿ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಕಾರಣಕ್ಕೆ ಬಡತನ ಮತ್ತು ತಾರತಮ್ಯ ಹೆಚ್ಚಾಯಿತು. ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಮೇಲು ಕೀಳಿನ, ಜಾತಿ ತಾರತಮ್ಯದ ವ್ಯವಸ್ಥೆಯನ್ನು ಅಳಿಸಿ ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮ ಎಂದು ಸಾರಿದರು. ನಾವು ವಿಶ್ವ ಮಾನವರಾಗದಿದ್ದರೂ ಬೇಡ, ಅಲ್ಪ ಮಾನವರಾಗಬಾರದು ಎಂದರು

ದ್ವೇಷ, ವೈರತ್ವ, ಸೇಡು ಮನುಷ್ಯನ ಗುಣ ಅಲ್ಲ.‌ ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ಜಾತಿ-ಧರ್ಮದ ಕಾರಣಕ್ಕೆ ದ್ವೇಷಿಸುತ್ತೀವಿ. ಇದು ಅತ್ಯಂತ ಅನಾಗರಿಕ ಎಂದು ತಿಳಿಸಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 hour ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

2 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

7 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago