ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಮಾಡುವುದೇ ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ- ಸಿಎಂ ಸಿದ್ದರಾಮಯ್ಯ

ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದೆ. ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಇವೆರಡರ ಗುರಿಯೂ ಆಗಿದೆ. ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ. ಇಂಥಾ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಆ ಋಣವನ್ನು ತೀರಿಸುವ ಮೂಲಕ ಬಸವಾದಿ ಶರಣರ ಆಶಯದ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶರಣರು ನುಡಿದಂತೆ ನಡೆದವರು. ನಾವೂ ಆ ಮಾರ್ಗದಲ್ಲಿ ನಡೆಯಬೇಕು ಎಂದು‌ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ, ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಅಖಿಲ‌ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬೇಡಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ವಚನ ಸಂಸ್ಕೃತಿ ಅಂದರೆ ಮಾನವೀಯ ಸಂಸ್ಕೃತಿ. ಮಾನವೀಯ ಬದಲಾವಣೆಯನ್ನು ಸಮಾಜದಲ್ಲಿ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಕಾರಣಕ್ಕೆ ಬಡತನ ಮತ್ತು ತಾರತಮ್ಯ ಹೆಚ್ಚಾಯಿತು. ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಮೇಲು ಕೀಳಿನ, ಜಾತಿ ತಾರತಮ್ಯದ ವ್ಯವಸ್ಥೆಯನ್ನು ಅಳಿಸಿ ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮ ಎಂದು ಸಾರಿದರು. ನಾವು ವಿಶ್ವ ಮಾನವರಾಗದಿದ್ದರೂ ಬೇಡ, ಅಲ್ಪ ಮಾನವರಾಗಬಾರದು ಎಂದರು

ದ್ವೇಷ, ವೈರತ್ವ, ಸೇಡು ಮನುಷ್ಯನ ಗುಣ ಅಲ್ಲ.‌ ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ಜಾತಿ-ಧರ್ಮದ ಕಾರಣಕ್ಕೆ ದ್ವೇಷಿಸುತ್ತೀವಿ. ಇದು ಅತ್ಯಂತ ಅನಾಗರಿಕ ಎಂದು ತಿಳಿಸಿದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

6 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

17 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago