ಜಾತಿ ವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ, ಅಸಮಾನತೆಯಿದೆ- ಸಿಎಂ ಸಿದ್ದರಾಮಯ್ಯ

ಅಸಮಾನತೆಯನ್ನು ಹೋಗಲಾಡಿಸಿ, ಸಮಸಮಾಜ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಶಿಕ್ಷಣದ ಜೊತೆಗೆ ವಿದ್ಯಾವಂತರು ಮಾನವೀಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಹಿಂದೆ ನಮ್ಮ ಸಮಾಜದಲ್ಲಿ, ಶೋಷಿತ ವರ್ಗದ ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಅಂಬೇಡ್ಕರ್ ಅವರ ಪರಿಶ್ರಮದಿಂದ ಅವರಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡಲಾಗುತ್ತಿತ್ತು. ಶೋಷಿತವರ್ಗದವರಿಗೆ ನ್ಯಾಯ ಒದಗಿಸಿ ಸಮಸಮಾಜ ನಿರ್ಮಿಸಬೇಕೆಂಬ ಗುರಿಯೊಂದಿಗೆ ಅಂಬೇಡ್ಕರ್ ರವರು ಹೋರಾಡಿದರು ಎಂದರು.

ಬಾಬಾಸಾಹೇಬ್ ಅಂಬೇಡ್ಕರ್ ಭಾರತ ಕಂಡ ಮಹಾನ್ ಮೇಧಾವಿ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯ ಹಾಗೂ ಜನರಿಗೆ ನೀಡುವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಓದಬೇಕೆಂದು ಸರ್ಕಾರ ತಿಳಿಸಿದೆ ಎಂದು ತಿಳಿಸಿದರು.

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ, ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮ ಸಮಾಜದ ಕನಸು ಈಡೇರಬೇಕಿದೆ. ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.

ಅಂಬೇಡ್ಕರ್ ಅವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಜಯಪ್ರಕಾಶ್ ನಾರಾಯಣ ಅವರು 1980 ರಲ್ಲಿ ಡಾII ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವನ್ನು ಪ್ರಾರಂಭಿಸಿದರು. ಇಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಡಾ.ಅಂಬೇಡ್ಕರ್ ರವರ ಮೂಲಮಂತ್ರವಾಗಿದ್ದ ಶಿಕ್ಷಣ, ಸಂಘಟನೆ, ಹೋರಾಟಗಳ ಆದರ್ಶಗಳನ್ನು ಪಾಲಿಸಬೇಕಾದುದ್ದು ವಿದ್ಯಾರ್ಥಿಗಳ ಕರ್ತವ್ಯವಾಗಿದ್ದು, ಸಮಾಜದ ಬದಲಾವಣೆಗೆ ಶ್ರಮಿಸಬೇಕು ಎಂದರು.

ಪ್ರತಿ ವರ್ಷ ಇಂಜಿನಿಯರಿಂಗ್ ಪದವಿ ಪಡೆಯುವ ವಿದ್ಯಾರ್ಥಿಗಳಲ್ಲಿ ಕೇವಲ ಶೇ.15 ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿದೆ. ಕೈಗಾರಿಕೆಗಳಲ್ಲಿ ಹಾಗೂ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿಷಯಗಳಿಗೆ ಮಹತ್ವ ನೀಡಬೇಕು. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಯ ತರಬೇತಿ ನೀಡಿದರೆ, ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago