ಜಾತಿ ವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ, ಅಸಮಾನತೆಯಿದೆ- ಸಿಎಂ ಸಿದ್ದರಾಮಯ್ಯ

ಅಸಮಾನತೆಯನ್ನು ಹೋಗಲಾಡಿಸಿ, ಸಮಸಮಾಜ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಶಿಕ್ಷಣದ ಜೊತೆಗೆ ವಿದ್ಯಾವಂತರು ಮಾನವೀಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಹಿಂದೆ ನಮ್ಮ ಸಮಾಜದಲ್ಲಿ, ಶೋಷಿತ ವರ್ಗದ ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಅಂಬೇಡ್ಕರ್ ಅವರ ಪರಿಶ್ರಮದಿಂದ ಅವರಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡಲಾಗುತ್ತಿತ್ತು. ಶೋಷಿತವರ್ಗದವರಿಗೆ ನ್ಯಾಯ ಒದಗಿಸಿ ಸಮಸಮಾಜ ನಿರ್ಮಿಸಬೇಕೆಂಬ ಗುರಿಯೊಂದಿಗೆ ಅಂಬೇಡ್ಕರ್ ರವರು ಹೋರಾಡಿದರು ಎಂದರು.

ಬಾಬಾಸಾಹೇಬ್ ಅಂಬೇಡ್ಕರ್ ಭಾರತ ಕಂಡ ಮಹಾನ್ ಮೇಧಾವಿ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯ ಹಾಗೂ ಜನರಿಗೆ ನೀಡುವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಓದಬೇಕೆಂದು ಸರ್ಕಾರ ತಿಳಿಸಿದೆ ಎಂದು ತಿಳಿಸಿದರು.

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ, ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮ ಸಮಾಜದ ಕನಸು ಈಡೇರಬೇಕಿದೆ. ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.

ಅಂಬೇಡ್ಕರ್ ಅವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಜಯಪ್ರಕಾಶ್ ನಾರಾಯಣ ಅವರು 1980 ರಲ್ಲಿ ಡಾII ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವನ್ನು ಪ್ರಾರಂಭಿಸಿದರು. ಇಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಡಾ.ಅಂಬೇಡ್ಕರ್ ರವರ ಮೂಲಮಂತ್ರವಾಗಿದ್ದ ಶಿಕ್ಷಣ, ಸಂಘಟನೆ, ಹೋರಾಟಗಳ ಆದರ್ಶಗಳನ್ನು ಪಾಲಿಸಬೇಕಾದುದ್ದು ವಿದ್ಯಾರ್ಥಿಗಳ ಕರ್ತವ್ಯವಾಗಿದ್ದು, ಸಮಾಜದ ಬದಲಾವಣೆಗೆ ಶ್ರಮಿಸಬೇಕು ಎಂದರು.

ಪ್ರತಿ ವರ್ಷ ಇಂಜಿನಿಯರಿಂಗ್ ಪದವಿ ಪಡೆಯುವ ವಿದ್ಯಾರ್ಥಿಗಳಲ್ಲಿ ಕೇವಲ ಶೇ.15 ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿದೆ. ಕೈಗಾರಿಕೆಗಳಲ್ಲಿ ಹಾಗೂ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿಷಯಗಳಿಗೆ ಮಹತ್ವ ನೀಡಬೇಕು. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಯ ತರಬೇತಿ ನೀಡಿದರೆ, ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

2 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

12 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

14 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

19 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

21 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

24 hours ago