ಜಾತಿ ವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ, ಅಸಮಾನತೆಯಿದೆ- ಸಿಎಂ ಸಿದ್ದರಾಮಯ್ಯ

ಅಸಮಾನತೆಯನ್ನು ಹೋಗಲಾಡಿಸಿ, ಸಮಸಮಾಜ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಶಿಕ್ಷಣದ ಜೊತೆಗೆ ವಿದ್ಯಾವಂತರು ಮಾನವೀಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಹಿಂದೆ ನಮ್ಮ ಸಮಾಜದಲ್ಲಿ, ಶೋಷಿತ ವರ್ಗದ ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಅಂಬೇಡ್ಕರ್ ಅವರ ಪರಿಶ್ರಮದಿಂದ ಅವರಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡಲಾಗುತ್ತಿತ್ತು. ಶೋಷಿತವರ್ಗದವರಿಗೆ ನ್ಯಾಯ ಒದಗಿಸಿ ಸಮಸಮಾಜ ನಿರ್ಮಿಸಬೇಕೆಂಬ ಗುರಿಯೊಂದಿಗೆ ಅಂಬೇಡ್ಕರ್ ರವರು ಹೋರಾಡಿದರು ಎಂದರು.

ಬಾಬಾಸಾಹೇಬ್ ಅಂಬೇಡ್ಕರ್ ಭಾರತ ಕಂಡ ಮಹಾನ್ ಮೇಧಾವಿ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯ ಹಾಗೂ ಜನರಿಗೆ ನೀಡುವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಓದಬೇಕೆಂದು ಸರ್ಕಾರ ತಿಳಿಸಿದೆ ಎಂದು ತಿಳಿಸಿದರು.

ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ, ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮ ಸಮಾಜದ ಕನಸು ಈಡೇರಬೇಕಿದೆ. ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.

ಅಂಬೇಡ್ಕರ್ ಅವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಜಯಪ್ರಕಾಶ್ ನಾರಾಯಣ ಅವರು 1980 ರಲ್ಲಿ ಡಾII ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯವನ್ನು ಪ್ರಾರಂಭಿಸಿದರು. ಇಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಡಾ.ಅಂಬೇಡ್ಕರ್ ರವರ ಮೂಲಮಂತ್ರವಾಗಿದ್ದ ಶಿಕ್ಷಣ, ಸಂಘಟನೆ, ಹೋರಾಟಗಳ ಆದರ್ಶಗಳನ್ನು ಪಾಲಿಸಬೇಕಾದುದ್ದು ವಿದ್ಯಾರ್ಥಿಗಳ ಕರ್ತವ್ಯವಾಗಿದ್ದು, ಸಮಾಜದ ಬದಲಾವಣೆಗೆ ಶ್ರಮಿಸಬೇಕು ಎಂದರು.

ಪ್ರತಿ ವರ್ಷ ಇಂಜಿನಿಯರಿಂಗ್ ಪದವಿ ಪಡೆಯುವ ವಿದ್ಯಾರ್ಥಿಗಳಲ್ಲಿ ಕೇವಲ ಶೇ.15 ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತಿದೆ. ಕೈಗಾರಿಕೆಗಳಲ್ಲಿ ಹಾಗೂ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿಷಯಗಳಿಗೆ ಮಹತ್ವ ನೀಡಬೇಕು. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಕೌಶಲ್ಯಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿಯ ತರಬೇತಿ ನೀಡಿದರೆ, ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

11 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

12 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

13 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

13 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

20 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago