Categories: ಕೋಲಾರ

ಜಾತಿ ವ್ಯವಸ್ಥೆ ಬುಡ ಸಮೇತ ಕೀಳುವ ಪ್ರತಿಜ್ಞೆ ಮಾಡಿ- ನಾರಾಯಣಗೌಡ

ಕೋಲಾರ: ಕಾಯಕಯೋಗಿ ಬಸವಣ್ಣನ ಸದಾ ಕಾಲ ಸ್ವರಿಸುವ ಮೂಲಕ ಜಾತಿ ವ್ಯವಸ್ಥೆಯನ್ನು ಬುಡ ಸಮೇತ ಕೀಳುವ ಪ್ರತಿಜ್ಞೆ ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಕೂಲಿ ಕಾರ್ಮಿಕರಿಗೆ ಬಸವಣ್ಣನ ಚರಿತ್ರೆಯ ಬಗ್ಗೆ ಮನವರಿಕೆ ಮಾಡಿದರು.

12ನೇ ಶತಮಾನದಲ್ಲಿ ಸಮಾಜದ ಅನಾಚಾರಗಳಿಗೆ ವಿರುದ್ದವಾಗಿ ವಚನ ಸಾಹಿತ್ಯದ ಮೂಲಕ ಉತ್ತರ ನೀಡಿದ್ದಂತಹ ಬಸವಣ್ಣ ಯಾವುದೇ ಒಂದು ದರ್ಮಕ್ಕೆ ಸೀಮಿತವಾದವರಲ್ಲ ಅವರು ಇಡೀ ಮಾನವ ಕುಲಕೋಟಿಗೆ ತಮ್ಮ ಭಕ್ತಿ ಪ್ರಧಾನ ವಚನಗಳಲ್ಲಿ ಸಮಾಜದ ಅಂಕು ದೊಂಕುಗಳನ್ನು ಅಂದಿನ ಕಾಲದ ಸಮಾಜದಲ್ಲಿದ್ದ ಮೇಲೂ ಕೀಳೂ ಡಂಭಾಚಾರ ಮೂಡನಂಬಿಕೆ ಮುಂತಾದವುಗಳ ವಿರುದ್ದ ದ್ವನಿ ಎತ್ತಿದ ಬಸವಣ್ಣನವರು ವಚನಗಳೆಂಬ ಹೊಸ ಸಾಹಿತ್ಯ ಹುಟ್ಟು ಹಾಕಿದ ಕಾಯಕ ಯೋಗಿ ಇವರ ವಚನಗಳನ್ನು ಪ್ರತಿಯೊಬ್ಬರು ಸ್ಮರಿಸಬೇಕೆಂದು ವಿಚಾರದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.

ಕೂಲಿ ಕಾರ್ಮಿಕ ಮಹಿಳೆ ಐತಾಂಡಹಳ್ಳಿ ಶೈಲಜ ಮಾತನಾಡಿ ಬಸವಣ್ಣನವರು ಭಕ್ತರೆಲ್ಲಾ ಒಂದೇ ಅವರಲ್ಲಿ ತಾರತಮ್ಯವಿಲ್ಲ ಎಲ್ಲರೂ ಸಮಾನರು ಎಂದು ಸಾರಿದರು ನಾವು ಮಾಡಿದ ಉದ್ಯೋಗಗಳು ಹಾಗೂ ರಾಜಕೀಯ ವ್ಯಕ್ತಿಗಳ ರಾಜಕಾರಣಕ್ಕೆ ಜಾತಿಗಳು ಸೃಷ್ಠಿಯಾದವೆ ಹೊರತು ಹುಟ್ಟಿನಿಂದ ಜಾತಿಯನ್ನು ಅರಸಾಬಾರದು ಕಾಸಿ ಕಮ್ಮಾರನಾದ ಬಿಸಿ ಮಡಿವಾಳಾದ ಹಾಸನಿಕ್ಕಿ ಸಾಲಿಗನಾದ ವೇದವ ಮೋದಿ ಅರನಾದ ಕರ್ಣನಲ್ಲಿ ಜನಸಿದವರುಂಟೆ ಜಗವದೊಳಗೆ ಎಂದು ಅರ್ಥ ಪೂರ್ಣವಾವಿ ವಚನ ನೀಡಿದ ವಿಶ್ವ ಗುರು ಬಸವಣ್ಣ ದೇವರ ಹೆಸರಿನಲ್ಲಿ ಪ್ರಾಣ ಬಲಿ ಮೌಡ್ಯಗಳ ಆಚರಣೆಗಳನ್ನು ಖಂಡಿಸಿ ಅರಿವೇ ಗುರುವೆಂದು ಸಾರಿದರು. ಮಡಕೆ ದೈವ ಮೊರ ದೈವ ಬೀದಿಯಲ್ಲಿ ಕಲ್ಲು ದೈವ ಹಣೆಗೆ ದೈವ ಮತ್ತಿತರ ದೇವರ ಹೆಸರಿನಲ್ಲಿ ನಡೆಯುತ್ತಿದ್ದ ಕಂದಾಚಾರವನ್ನು ತಿರಸ್ಕರಿಸಿದ ಬಸವಣ್ಣನವರ ವಚನಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸುವ ಮುಖಾಂತರ ಕಂಪ್ಯೂಟರ್ ಯುಗದಿಂದ ಮತ್ತೆ ಯುವ ಪೀಳಿಗೆಯ ಭವಿಷ್ಯವನ್ನು ರಕ್ಷಣೆ ಮಾಡಬೇಕೆಂದು ಕಾರ್ಯಕ್ರಮದಲ್ಲಿ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ, ರತ್ನಮ್ಮ, ಸುನಿತಾ, ಶೋಭ, ರಾಧ, ಚೌಡಮ್ಮ, ಪುತ್ತೇರಿ ರಾಜು, ಗೀರೀಶ್ ಮುಂತಾದವರಿದ್ದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 hour ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

3 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

3 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

5 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

13 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

22 hours ago