Categories: ಕೋಲಾರ

ಜಾತಿ ವ್ಯವಸ್ಥೆ ಬುಡ ಸಮೇತ ಕೀಳುವ ಪ್ರತಿಜ್ಞೆ ಮಾಡಿ- ನಾರಾಯಣಗೌಡ

ಕೋಲಾರ: ಕಾಯಕಯೋಗಿ ಬಸವಣ್ಣನ ಸದಾ ಕಾಲ ಸ್ವರಿಸುವ ಮೂಲಕ ಜಾತಿ ವ್ಯವಸ್ಥೆಯನ್ನು ಬುಡ ಸಮೇತ ಕೀಳುವ ಪ್ರತಿಜ್ಞೆ ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಕೂಲಿ ಕಾರ್ಮಿಕರಿಗೆ ಬಸವಣ್ಣನ ಚರಿತ್ರೆಯ ಬಗ್ಗೆ ಮನವರಿಕೆ ಮಾಡಿದರು.

12ನೇ ಶತಮಾನದಲ್ಲಿ ಸಮಾಜದ ಅನಾಚಾರಗಳಿಗೆ ವಿರುದ್ದವಾಗಿ ವಚನ ಸಾಹಿತ್ಯದ ಮೂಲಕ ಉತ್ತರ ನೀಡಿದ್ದಂತಹ ಬಸವಣ್ಣ ಯಾವುದೇ ಒಂದು ದರ್ಮಕ್ಕೆ ಸೀಮಿತವಾದವರಲ್ಲ ಅವರು ಇಡೀ ಮಾನವ ಕುಲಕೋಟಿಗೆ ತಮ್ಮ ಭಕ್ತಿ ಪ್ರಧಾನ ವಚನಗಳಲ್ಲಿ ಸಮಾಜದ ಅಂಕು ದೊಂಕುಗಳನ್ನು ಅಂದಿನ ಕಾಲದ ಸಮಾಜದಲ್ಲಿದ್ದ ಮೇಲೂ ಕೀಳೂ ಡಂಭಾಚಾರ ಮೂಡನಂಬಿಕೆ ಮುಂತಾದವುಗಳ ವಿರುದ್ದ ದ್ವನಿ ಎತ್ತಿದ ಬಸವಣ್ಣನವರು ವಚನಗಳೆಂಬ ಹೊಸ ಸಾಹಿತ್ಯ ಹುಟ್ಟು ಹಾಕಿದ ಕಾಯಕ ಯೋಗಿ ಇವರ ವಚನಗಳನ್ನು ಪ್ರತಿಯೊಬ್ಬರು ಸ್ಮರಿಸಬೇಕೆಂದು ವಿಚಾರದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.

ಕೂಲಿ ಕಾರ್ಮಿಕ ಮಹಿಳೆ ಐತಾಂಡಹಳ್ಳಿ ಶೈಲಜ ಮಾತನಾಡಿ ಬಸವಣ್ಣನವರು ಭಕ್ತರೆಲ್ಲಾ ಒಂದೇ ಅವರಲ್ಲಿ ತಾರತಮ್ಯವಿಲ್ಲ ಎಲ್ಲರೂ ಸಮಾನರು ಎಂದು ಸಾರಿದರು ನಾವು ಮಾಡಿದ ಉದ್ಯೋಗಗಳು ಹಾಗೂ ರಾಜಕೀಯ ವ್ಯಕ್ತಿಗಳ ರಾಜಕಾರಣಕ್ಕೆ ಜಾತಿಗಳು ಸೃಷ್ಠಿಯಾದವೆ ಹೊರತು ಹುಟ್ಟಿನಿಂದ ಜಾತಿಯನ್ನು ಅರಸಾಬಾರದು ಕಾಸಿ ಕಮ್ಮಾರನಾದ ಬಿಸಿ ಮಡಿವಾಳಾದ ಹಾಸನಿಕ್ಕಿ ಸಾಲಿಗನಾದ ವೇದವ ಮೋದಿ ಅರನಾದ ಕರ್ಣನಲ್ಲಿ ಜನಸಿದವರುಂಟೆ ಜಗವದೊಳಗೆ ಎಂದು ಅರ್ಥ ಪೂರ್ಣವಾವಿ ವಚನ ನೀಡಿದ ವಿಶ್ವ ಗುರು ಬಸವಣ್ಣ ದೇವರ ಹೆಸರಿನಲ್ಲಿ ಪ್ರಾಣ ಬಲಿ ಮೌಡ್ಯಗಳ ಆಚರಣೆಗಳನ್ನು ಖಂಡಿಸಿ ಅರಿವೇ ಗುರುವೆಂದು ಸಾರಿದರು. ಮಡಕೆ ದೈವ ಮೊರ ದೈವ ಬೀದಿಯಲ್ಲಿ ಕಲ್ಲು ದೈವ ಹಣೆಗೆ ದೈವ ಮತ್ತಿತರ ದೇವರ ಹೆಸರಿನಲ್ಲಿ ನಡೆಯುತ್ತಿದ್ದ ಕಂದಾಚಾರವನ್ನು ತಿರಸ್ಕರಿಸಿದ ಬಸವಣ್ಣನವರ ವಚನಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸುವ ಮುಖಾಂತರ ಕಂಪ್ಯೂಟರ್ ಯುಗದಿಂದ ಮತ್ತೆ ಯುವ ಪೀಳಿಗೆಯ ಭವಿಷ್ಯವನ್ನು ರಕ್ಷಣೆ ಮಾಡಬೇಕೆಂದು ಕಾರ್ಯಕ್ರಮದಲ್ಲಿ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ, ರತ್ನಮ್ಮ, ಸುನಿತಾ, ಶೋಭ, ರಾಧ, ಚೌಡಮ್ಮ, ಪುತ್ತೇರಿ ರಾಜು, ಗೀರೀಶ್ ಮುಂತಾದವರಿದ್ದರು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 hour ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

12 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago