ಕೋಲಾರ: ಕಾಯಕಯೋಗಿ ಬಸವಣ್ಣನ ಸದಾ ಕಾಲ ಸ್ವರಿಸುವ ಮೂಲಕ ಜಾತಿ ವ್ಯವಸ್ಥೆಯನ್ನು ಬುಡ ಸಮೇತ ಕೀಳುವ ಪ್ರತಿಜ್ಞೆ ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಕೂಲಿ ಕಾರ್ಮಿಕರಿಗೆ ಬಸವಣ್ಣನ ಚರಿತ್ರೆಯ ಬಗ್ಗೆ ಮನವರಿಕೆ ಮಾಡಿದರು.
12ನೇ ಶತಮಾನದಲ್ಲಿ ಸಮಾಜದ ಅನಾಚಾರಗಳಿಗೆ ವಿರುದ್ದವಾಗಿ ವಚನ ಸಾಹಿತ್ಯದ ಮೂಲಕ ಉತ್ತರ ನೀಡಿದ್ದಂತಹ ಬಸವಣ್ಣ ಯಾವುದೇ ಒಂದು ದರ್ಮಕ್ಕೆ ಸೀಮಿತವಾದವರಲ್ಲ ಅವರು ಇಡೀ ಮಾನವ ಕುಲಕೋಟಿಗೆ ತಮ್ಮ ಭಕ್ತಿ ಪ್ರಧಾನ ವಚನಗಳಲ್ಲಿ ಸಮಾಜದ ಅಂಕು ದೊಂಕುಗಳನ್ನು ಅಂದಿನ ಕಾಲದ ಸಮಾಜದಲ್ಲಿದ್ದ ಮೇಲೂ ಕೀಳೂ ಡಂಭಾಚಾರ ಮೂಡನಂಬಿಕೆ ಮುಂತಾದವುಗಳ ವಿರುದ್ದ ದ್ವನಿ ಎತ್ತಿದ ಬಸವಣ್ಣನವರು ವಚನಗಳೆಂಬ ಹೊಸ ಸಾಹಿತ್ಯ ಹುಟ್ಟು ಹಾಕಿದ ಕಾಯಕ ಯೋಗಿ ಇವರ ವಚನಗಳನ್ನು ಪ್ರತಿಯೊಬ್ಬರು ಸ್ಮರಿಸಬೇಕೆಂದು ವಿಚಾರದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.
ಕೂಲಿ ಕಾರ್ಮಿಕ ಮಹಿಳೆ ಐತಾಂಡಹಳ್ಳಿ ಶೈಲಜ ಮಾತನಾಡಿ ಬಸವಣ್ಣನವರು ಭಕ್ತರೆಲ್ಲಾ ಒಂದೇ ಅವರಲ್ಲಿ ತಾರತಮ್ಯವಿಲ್ಲ ಎಲ್ಲರೂ ಸಮಾನರು ಎಂದು ಸಾರಿದರು ನಾವು ಮಾಡಿದ ಉದ್ಯೋಗಗಳು ಹಾಗೂ ರಾಜಕೀಯ ವ್ಯಕ್ತಿಗಳ ರಾಜಕಾರಣಕ್ಕೆ ಜಾತಿಗಳು ಸೃಷ್ಠಿಯಾದವೆ ಹೊರತು ಹುಟ್ಟಿನಿಂದ ಜಾತಿಯನ್ನು ಅರಸಾಬಾರದು ಕಾಸಿ ಕಮ್ಮಾರನಾದ ಬಿಸಿ ಮಡಿವಾಳಾದ ಹಾಸನಿಕ್ಕಿ ಸಾಲಿಗನಾದ ವೇದವ ಮೋದಿ ಅರನಾದ ಕರ್ಣನಲ್ಲಿ ಜನಸಿದವರುಂಟೆ ಜಗವದೊಳಗೆ ಎಂದು ಅರ್ಥ ಪೂರ್ಣವಾವಿ ವಚನ ನೀಡಿದ ವಿಶ್ವ ಗುರು ಬಸವಣ್ಣ ದೇವರ ಹೆಸರಿನಲ್ಲಿ ಪ್ರಾಣ ಬಲಿ ಮೌಡ್ಯಗಳ ಆಚರಣೆಗಳನ್ನು ಖಂಡಿಸಿ ಅರಿವೇ ಗುರುವೆಂದು ಸಾರಿದರು. ಮಡಕೆ ದೈವ ಮೊರ ದೈವ ಬೀದಿಯಲ್ಲಿ ಕಲ್ಲು ದೈವ ಹಣೆಗೆ ದೈವ ಮತ್ತಿತರ ದೇವರ ಹೆಸರಿನಲ್ಲಿ ನಡೆಯುತ್ತಿದ್ದ ಕಂದಾಚಾರವನ್ನು ತಿರಸ್ಕರಿಸಿದ ಬಸವಣ್ಣನವರ ವಚನಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸುವ ಮುಖಾಂತರ ಕಂಪ್ಯೂಟರ್ ಯುಗದಿಂದ ಮತ್ತೆ ಯುವ ಪೀಳಿಗೆಯ ಭವಿಷ್ಯವನ್ನು ರಕ್ಷಣೆ ಮಾಡಬೇಕೆಂದು ಕಾರ್ಯಕ್ರಮದಲ್ಲಿ ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ, ರತ್ನಮ್ಮ, ಸುನಿತಾ, ಶೋಭ, ರಾಧ, ಚೌಡಮ್ಮ, ಪುತ್ತೇರಿ ರಾಜು, ಗೀರೀಶ್ ಮುಂತಾದವರಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…