ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿದ್ದಾರೆ. ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದ್ದರೂ ತೊಡೆದುಹಾಕುವ ಬಗೆ ಹೇಗೆ ಎಂಬುದನ್ನು ತುಸು ವಿವರಿಸಿದ್ದರೆ ಅವರ ಉದ್ದೇಶ ಸ್ಪಷ್ಟವಾಗುತ್ತಿತ್ತು ಎಂದು ಹೇಳಿದ್ದಾರೆ.
ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ ಅವರು ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ? ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ. ಈ ಪ್ರಾದೇಶಿಕತೆಯನ್ನು ತೊಡೆದುಹಾಕುವುದೆಂದರೆ ವೈವಿಧ್ಯತೆಯನ್ನು ನಾಶಮಾಡುವುದೇ? ಎಂದು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಹಾಗೂ ಪರಿವಾರ ಆಗಾಗ ಏಕಭಾಷೆ, ಏಕ ಸಂಸ್ಕೃತಿಯ ಭಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕತೆಯನ್ನು ತೊಡೆದುಹಾಕಲು ನೀಡುವ ಕರೆ ರಾಜ್ಯಗಳ ಅಸ್ಮಿತೆಗೆ ನೀಡಿರುವ ಬೆದರಿಕೆಯ ರೀತಿ ಕಾಣುತ್ತಿದೆ. ಇದನ್ನು ಒಪ್ಪಲು ಸಾಧ್ಯ ಇಲ್ಲ. ಇಂತಹದ್ದೊಂದು ಹೇಳಿಕೆ ಸಾಕ್ಷಾತ್ ಪ್ರಧಾನಮಂತ್ರಿಯವರಿಂದಲೇ ಬಂದಿರುವುದರಿಂದ ಅವರೇ ಇದಕ್ಕೆ ಸ್ಪಷ್ಟೀಕರಣ ನೀಡಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.
ಹಿಂದೂ ಧರ್ಮದ ಬಗ್ಗೆ ದಣಿವಿಲ್ಲದಂತೆ ರಾತ್ರಿ-ಹಗಲು ಮಾತನಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಜಾತಿಯ ಪ್ರಶ್ನೆ ಎದುರಾದ ಕೂಡಲೇ ಭೀತಿಗೀಡಾಗುತ್ತಿರುವುದು ಯಾಕೆ? ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದು ನಮ್ಮ ನಡುವೆ ಇರುವುದನ್ನು ಒಪ್ಪಿಕೊಳ್ಳಬೇಕಲ್ಲವೇ? ಜಾತಿ ಕುರುಡಿನಿಂದ ಜಾತೀಯತೆಯ ನಿರ್ಮೂಲನೆ ಅಸಾಧ್ಯ ಎನ್ನುವುದನ್ನು ಮಾನ್ಯ ನರೇಂದ್ರ ಮೋದಿ ಅವರು ಅರಿತಿದ್ದಾರೆ ಎಂದು ಭಾವಿಸುವೆ ಎಂದು ಹೇಳಿದ್ದಾರೆ.
ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದಕ್ಕೆ ಅಂಟಿ ಕೊಂಡಿರುವ ಅಸ್ಪೃಶ್ಯತೆ, ಅಸಮಾನತೆ, ಲಿಂಗತಾರತಮ್ಯ ಮತ್ತು ಶೋಷಕ ವ್ಯವಸ್ಥೆಯನ್ನು ತೊಡೆದುಹಾಕಬೇಕು. ಜಾತಿ ಆಧಾರಿತ ಅಸಮಾನತೆಯನ್ನು ನಿವಾರಣೆ ಮಾಡುವ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಜಾರಿಗೆ ತಂದಿದ್ದರು. ಮೀಸಲಾತಿಯನ್ನು ಜಾತಿ ಆಧಾರದಲ್ಲಿಯೇ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಜಾತೀಯತೆಯನ್ನು ತೊಡೆದುಹಾಕಲು ನೀಡಿರುವ ಕರೆ ಮೀಸಲಾತಿಯನ್ನು ವಿರೋಧಿಸಲು ನೀಡಿರುವ ಪ್ರಚೋದನೆಯಂತೆ ಕಾಣುತ್ತಿದೆ. ಈ ಬಗ್ಗೆ ದೇಶದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…