ಜಾತೀಯತೆ, ಪ್ರಾದೇಶಿಕತೆ ತೊಡೆದುಹಾಕಬೇಕು ಎಂದು ಪಿಎಂ ಮೋದಿ ಹೇಳಿಕೆ ವಿಚಾರ: ಜಾತೀಯತೆ ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದೆ-ಪ್ರಾದೇಶಿಕತೆಯನ್ನ ಕೂಡಾ ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ?- ಸಿಎಂ ಪ್ರಶ್ನೆ

ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿದ್ದಾರೆ. ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದ್ದರೂ ತೊಡೆದುಹಾಕುವ ಬಗೆ ಹೇಗೆ ಎಂಬುದನ್ನು ತುಸು ವಿವರಿಸಿದ್ದರೆ ಅವರ ಉದ್ದೇಶ ಸ್ಪಷ್ಟವಾಗುತ್ತಿತ್ತು ಎಂದು ಹೇಳಿದ್ದಾರೆ.

ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ ಅವರು ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ? ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ. ಈ ಪ್ರಾದೇಶಿಕತೆಯನ್ನು ತೊಡೆದುಹಾಕುವುದೆಂದರೆ ವೈವಿಧ್ಯತೆಯನ್ನು ನಾಶಮಾಡುವುದೇ? ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಹಾಗೂ ಪರಿವಾರ ಆಗಾಗ ಏಕಭಾಷೆ, ಏಕ ಸಂಸ್ಕೃತಿಯ ಭಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕತೆಯನ್ನು ತೊಡೆದುಹಾಕಲು ನೀಡುವ ಕರೆ ರಾಜ್ಯಗಳ ಅಸ್ಮಿತೆಗೆ ನೀಡಿರುವ ಬೆದರಿಕೆಯ ರೀತಿ ಕಾಣುತ್ತಿದೆ. ಇದನ್ನು ಒಪ್ಪಲು ಸಾಧ್ಯ ಇಲ್ಲ. ಇಂತಹದ್ದೊಂದು ಹೇಳಿಕೆ ಸಾಕ್ಷಾತ್ ಪ್ರಧಾನಮಂತ್ರಿಯವರಿಂದಲೇ ಬಂದಿರುವುದರಿಂದ ಅವರೇ ಇದಕ್ಕೆ ಸ್ಪಷ್ಟೀಕರಣ ನೀಡಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ದಣಿವಿಲ್ಲದಂತೆ ರಾತ್ರಿ-ಹಗಲು ಮಾತನಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಜಾತಿಯ ಪ್ರಶ್ನೆ ಎದುರಾದ ಕೂಡಲೇ ಭೀತಿಗೀಡಾಗುತ್ತಿರುವುದು ಯಾಕೆ? ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದು ನಮ್ಮ ನಡುವೆ ಇರುವುದನ್ನು ಒಪ್ಪಿಕೊಳ್ಳಬೇಕಲ್ಲವೇ? ಜಾತಿ ಕುರುಡಿನಿಂದ ಜಾತೀಯತೆಯ ನಿರ್ಮೂಲನೆ ಅಸಾಧ್ಯ ಎನ್ನುವುದನ್ನು ಮಾನ್ಯ ನರೇಂದ್ರ ಮೋದಿ ಅವರು ಅರಿತಿದ್ದಾರೆ ಎಂದು ಭಾವಿಸುವೆ ಎಂದು ಹೇಳಿದ್ದಾರೆ.

ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದಕ್ಕೆ ಅಂಟಿ ಕೊಂಡಿರುವ ಅಸ್ಪೃಶ್ಯತೆ, ಅಸಮಾನತೆ, ಲಿಂಗತಾರತಮ್ಯ ಮತ್ತು ಶೋಷಕ ವ್ಯವಸ್ಥೆಯನ್ನು ತೊಡೆದುಹಾಕಬೇಕು. ಜಾತಿ ಆಧಾರಿತ ಅಸಮಾನತೆಯನ್ನು ನಿವಾರಣೆ ಮಾಡುವ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಜಾರಿಗೆ ತಂದಿದ್ದರು. ಮೀಸಲಾತಿಯನ್ನು ಜಾತಿ ಆಧಾರದಲ್ಲಿಯೇ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಜಾತೀಯತೆಯನ್ನು ತೊಡೆದುಹಾಕಲು ನೀಡಿರುವ ಕರೆ ಮೀಸಲಾತಿಯನ್ನು ವಿರೋಧಿಸಲು ನೀಡಿರುವ ಪ್ರಚೋದನೆಯಂತೆ ಕಾಣುತ್ತಿದೆ. ಈ ಬಗ್ಗೆ ದೇಶದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

2 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

2 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

5 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

8 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

11 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

15 hours ago