ಜಾತೀಯತೆ, ಪ್ರಾದೇಶಿಕತೆ ತೊಡೆದುಹಾಕಬೇಕು ಎಂದು ಪಿಎಂ ಮೋದಿ ಹೇಳಿಕೆ ವಿಚಾರ: ಜಾತೀಯತೆ ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದೆ-ಪ್ರಾದೇಶಿಕತೆಯನ್ನ ಕೂಡಾ ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ?- ಸಿಎಂ ಪ್ರಶ್ನೆ

ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿದ್ದಾರೆ. ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದ್ದರೂ ತೊಡೆದುಹಾಕುವ ಬಗೆ ಹೇಗೆ ಎಂಬುದನ್ನು ತುಸು ವಿವರಿಸಿದ್ದರೆ ಅವರ ಉದ್ದೇಶ ಸ್ಪಷ್ಟವಾಗುತ್ತಿತ್ತು ಎಂದು ಹೇಳಿದ್ದಾರೆ.

ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ ಅವರು ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ? ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ. ಈ ಪ್ರಾದೇಶಿಕತೆಯನ್ನು ತೊಡೆದುಹಾಕುವುದೆಂದರೆ ವೈವಿಧ್ಯತೆಯನ್ನು ನಾಶಮಾಡುವುದೇ? ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಹಾಗೂ ಪರಿವಾರ ಆಗಾಗ ಏಕಭಾಷೆ, ಏಕ ಸಂಸ್ಕೃತಿಯ ಭಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕತೆಯನ್ನು ತೊಡೆದುಹಾಕಲು ನೀಡುವ ಕರೆ ರಾಜ್ಯಗಳ ಅಸ್ಮಿತೆಗೆ ನೀಡಿರುವ ಬೆದರಿಕೆಯ ರೀತಿ ಕಾಣುತ್ತಿದೆ. ಇದನ್ನು ಒಪ್ಪಲು ಸಾಧ್ಯ ಇಲ್ಲ. ಇಂತಹದ್ದೊಂದು ಹೇಳಿಕೆ ಸಾಕ್ಷಾತ್ ಪ್ರಧಾನಮಂತ್ರಿಯವರಿಂದಲೇ ಬಂದಿರುವುದರಿಂದ ಅವರೇ ಇದಕ್ಕೆ ಸ್ಪಷ್ಟೀಕರಣ ನೀಡಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ದಣಿವಿಲ್ಲದಂತೆ ರಾತ್ರಿ-ಹಗಲು ಮಾತನಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಜಾತಿಯ ಪ್ರಶ್ನೆ ಎದುರಾದ ಕೂಡಲೇ ಭೀತಿಗೀಡಾಗುತ್ತಿರುವುದು ಯಾಕೆ? ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದು ನಮ್ಮ ನಡುವೆ ಇರುವುದನ್ನು ಒಪ್ಪಿಕೊಳ್ಳಬೇಕಲ್ಲವೇ? ಜಾತಿ ಕುರುಡಿನಿಂದ ಜಾತೀಯತೆಯ ನಿರ್ಮೂಲನೆ ಅಸಾಧ್ಯ ಎನ್ನುವುದನ್ನು ಮಾನ್ಯ ನರೇಂದ್ರ ಮೋದಿ ಅವರು ಅರಿತಿದ್ದಾರೆ ಎಂದು ಭಾವಿಸುವೆ ಎಂದು ಹೇಳಿದ್ದಾರೆ.

ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದಕ್ಕೆ ಅಂಟಿ ಕೊಂಡಿರುವ ಅಸ್ಪೃಶ್ಯತೆ, ಅಸಮಾನತೆ, ಲಿಂಗತಾರತಮ್ಯ ಮತ್ತು ಶೋಷಕ ವ್ಯವಸ್ಥೆಯನ್ನು ತೊಡೆದುಹಾಕಬೇಕು. ಜಾತಿ ಆಧಾರಿತ ಅಸಮಾನತೆಯನ್ನು ನಿವಾರಣೆ ಮಾಡುವ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಜಾರಿಗೆ ತಂದಿದ್ದರು. ಮೀಸಲಾತಿಯನ್ನು ಜಾತಿ ಆಧಾರದಲ್ಲಿಯೇ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಜಾತೀಯತೆಯನ್ನು ತೊಡೆದುಹಾಕಲು ನೀಡಿರುವ ಕರೆ ಮೀಸಲಾತಿಯನ್ನು ವಿರೋಧಿಸಲು ನೀಡಿರುವ ಪ್ರಚೋದನೆಯಂತೆ ಕಾಣುತ್ತಿದೆ. ಈ ಬಗ್ಗೆ ದೇಶದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

18 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

23 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago