ಜಾತೀಯತೆ, ಪ್ರಾದೇಶಿಕತೆ ತೊಡೆದುಹಾಕಬೇಕು ಎಂದು ಪಿಎಂ ಮೋದಿ ಹೇಳಿಕೆ ವಿಚಾರ: ಜಾತೀಯತೆ ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದೆ-ಪ್ರಾದೇಶಿಕತೆಯನ್ನ ಕೂಡಾ ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ?- ಸಿಎಂ ಪ್ರಶ್ನೆ

ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿದ್ದಾರೆ. ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದ್ದರೂ ತೊಡೆದುಹಾಕುವ ಬಗೆ ಹೇಗೆ ಎಂಬುದನ್ನು ತುಸು ವಿವರಿಸಿದ್ದರೆ ಅವರ ಉದ್ದೇಶ ಸ್ಪಷ್ಟವಾಗುತ್ತಿತ್ತು ಎಂದು ಹೇಳಿದ್ದಾರೆ.

ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ ಅವರು ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ? ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ. ಈ ಪ್ರಾದೇಶಿಕತೆಯನ್ನು ತೊಡೆದುಹಾಕುವುದೆಂದರೆ ವೈವಿಧ್ಯತೆಯನ್ನು ನಾಶಮಾಡುವುದೇ? ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಹಾಗೂ ಪರಿವಾರ ಆಗಾಗ ಏಕಭಾಷೆ, ಏಕ ಸಂಸ್ಕೃತಿಯ ಭಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕತೆಯನ್ನು ತೊಡೆದುಹಾಕಲು ನೀಡುವ ಕರೆ ರಾಜ್ಯಗಳ ಅಸ್ಮಿತೆಗೆ ನೀಡಿರುವ ಬೆದರಿಕೆಯ ರೀತಿ ಕಾಣುತ್ತಿದೆ. ಇದನ್ನು ಒಪ್ಪಲು ಸಾಧ್ಯ ಇಲ್ಲ. ಇಂತಹದ್ದೊಂದು ಹೇಳಿಕೆ ಸಾಕ್ಷಾತ್ ಪ್ರಧಾನಮಂತ್ರಿಯವರಿಂದಲೇ ಬಂದಿರುವುದರಿಂದ ಅವರೇ ಇದಕ್ಕೆ ಸ್ಪಷ್ಟೀಕರಣ ನೀಡಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ದಣಿವಿಲ್ಲದಂತೆ ರಾತ್ರಿ-ಹಗಲು ಮಾತನಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತು ಅವರ ಪಕ್ಷ ಜಾತಿಯ ಪ್ರಶ್ನೆ ಎದುರಾದ ಕೂಡಲೇ ಭೀತಿಗೀಡಾಗುತ್ತಿರುವುದು ಯಾಕೆ? ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದು ನಮ್ಮ ನಡುವೆ ಇರುವುದನ್ನು ಒಪ್ಪಿಕೊಳ್ಳಬೇಕಲ್ಲವೇ? ಜಾತಿ ಕುರುಡಿನಿಂದ ಜಾತೀಯತೆಯ ನಿರ್ಮೂಲನೆ ಅಸಾಧ್ಯ ಎನ್ನುವುದನ್ನು ಮಾನ್ಯ ನರೇಂದ್ರ ಮೋದಿ ಅವರು ಅರಿತಿದ್ದಾರೆ ಎಂದು ಭಾವಿಸುವೆ ಎಂದು ಹೇಳಿದ್ದಾರೆ.

ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದಕ್ಕೆ ಅಂಟಿ ಕೊಂಡಿರುವ ಅಸ್ಪೃಶ್ಯತೆ, ಅಸಮಾನತೆ, ಲಿಂಗತಾರತಮ್ಯ ಮತ್ತು ಶೋಷಕ ವ್ಯವಸ್ಥೆಯನ್ನು ತೊಡೆದುಹಾಕಬೇಕು. ಜಾತಿ ಆಧಾರಿತ ಅಸಮಾನತೆಯನ್ನು ನಿವಾರಣೆ ಮಾಡುವ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಜಾರಿಗೆ ತಂದಿದ್ದರು. ಮೀಸಲಾತಿಯನ್ನು ಜಾತಿ ಆಧಾರದಲ್ಲಿಯೇ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಜಾತೀಯತೆಯನ್ನು ತೊಡೆದುಹಾಕಲು ನೀಡಿರುವ ಕರೆ ಮೀಸಲಾತಿಯನ್ನು ವಿರೋಧಿಸಲು ನೀಡಿರುವ ಪ್ರಚೋದನೆಯಂತೆ ಕಾಣುತ್ತಿದೆ. ಈ ಬಗ್ಗೆ ದೇಶದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

4 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

6 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

9 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

24 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago